ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 01:46 pm
HK News Desk
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 02:28 pm
Bangalore Correspondent
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm