ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am