ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm