ಬ್ರೇಕಿಂಗ್ ನ್ಯೂಸ್
10-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಇತ್ತೀಚಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ವಾರಕ್ಕೆ 70 ಗಂಟೆ ದುಡಿಯಬೇಕೆಂದು ಹೇಳಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅದೇ ಧಾಟಿಯಲ್ಲಿ ದೇಶದ ಮತ್ತೊಂದು ದೈತ್ಯ ಕಂಪನಿ ಲಾರ್ಸನ್ ಆಂಡ್ ಟರ್ಬೊ (L&T) ಅಧ್ಯಕ್ಷ ಸುಬ್ರಹ್ಮಣ್ಯನ್ ಮಾತನಾಡಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಎಲ್&ಟಿ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್, ವಾರಕ್ಕೊಮ್ಮೆ ಭಾನುವಾರ ಕೆಲಸಕ್ಕೆ ರಜೆ ನೀಡಿ, ನಿಮ್ಮಿಂದ ಕೆಲಸ ತೆಗೆಸಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಾಗುತ್ತಿದೆ ಎಂದು ಸಂಸ್ಥೆಯ ಆಂತರಿಕ ಸಭೆಯಲ್ಲಿ ನೀಡಿರುವ ಹೇಳಿಕೆ ಕಾರ್ಪೊರೇಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾರ್ಪೊರೇಟ್ ವಲಯದ ಉದ್ಯೋಗಸ್ಥರು ಸುಬ್ರಹ್ಮಣ್ಯನ್ ಅವರ ಹೇಳಿಕೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಂಸ್ಥೆಯ ಆಂತರಿಕ ಸಭೆಯಲ್ಲಿ ಶನಿವಾರವನ್ನು ಕಡ್ಡಾಯ ಕೆಲಸದ ದಿನವನ್ನಾಗಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸುಬ್ರಹ್ಮಣ್ಯನ್, ನಿಮ್ಮನ್ನು ಭಾನುವಾರಗಳಂದು ಕೆಲಸದಲ್ಲಿ ತೊಡಗಿಸದೇ ಇರುವುದಕ್ಕೆ ವಿಷಾದವಿದೆ. ಭಾನುವಾರವೂ ಕೆಲಸ ಮಾಡಿಸುವಂತಾದರೆ ಅದು ನನಗೆ ಹೆಚ್ಚಿನ ಖುಷಿ ಕೊಡುತ್ತದೆ. ಏಕೆಂದರೆ ನಾನೂ ಭಾನುವಾರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಭಾನುವಾರಗಳಂದು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ಎಷ್ಟು ಸಮಯದ ವರೆಗೆ ನಿಮ್ಮ ಹೆಂಡತಿಯನ್ನು ನೋಡುತ್ತಾ ಕುಳಿತಿರುತ್ತೀರಿ? ಹೆಂಡತಿಯರೂ ಅಷ್ಟೇ ಎಷ್ಟು ಅಂತ ಗಂಡನ ಮುಖ ನೋಡುತ್ತಾ ಕುಳಿತಿರಲು ಸಾಧ್ಯ? ಅದರ ಬದಲು ಕಚೇರಿಗೆ ಬಂದು ಕೆಲಸದಲ್ಲಿ ತೊಡಗಬಹುದು ಎಂದು ತನ್ನ ನೌಕರರಿಗೆ ಕರೆ ನೀಡಿದ್ದಾರೆ.
ತಮ್ಮ ಹೇಳಿಕೆಯನ್ನು ಸಮರ್ಥಿಸಲು ಚೀನಾದ ಉದಾಹರಣೆ ನೀಡಿರುವ ಸುಬ್ರಹ್ಮಣ್ಯನ್, ಅಮೇರಿಕಾವನ್ನು ಹಿಂದಿಕ್ಕುವುದಕ್ಕೆ ಚೀನಾಗೆ ಸಾಧ್ಯವಾಗಿರುವುದು ಅಲ್ಲಿನ ಜನರ ತೀವ್ರವಾದ ಕೆಲಸದ ಸಂಸ್ಕೃತಿ. ಚೀನಾದವರು ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಾರೆ, ಅಮೇರಿಕನ್ನರು ವಾರಕ್ಕೆ 50 ಗಂಟೆಯಷ್ಟೇ ಕೆಲಸ ಮಾಡುತ್ತಾರೆ. ನಮ್ಮ ಸಂಸ್ಥೆಯ ನೌಕರರೂ ಸಹ ಇದೇ ರೀತಿಯಲ್ಲಿ ವಾರಕ್ಕೆ 90 ಗಂಟೆ ಕೆಲಸ ಮಾಡುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲು ನಾವು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕಿದೆ ಎಂದು ಸುಬ್ರಹ್ಮಣ್ಯನ್ ಅಭಿಪ್ರಾಯಪಟ್ಟಿದ್ದಾರೆ.
In a now-viral video, Larsen & Toubro Chairman SN Subrahmanyan has ignited a storm of criticism for suggesting employees should work 90 hours a week, including Sundays.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am