ಬ್ರೇಕಿಂಗ್ ನ್ಯೂಸ್
10-01-25 11:01 pm Bangalore Correspondent ಕರ್ನಾಟಕ
ಮೈಸೂರು/ಬೆಂಗಳೂರು, ಜ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ. ಗೌರವ ಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.
ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ.
ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳು 10 ಸಾವಿರ ರೂ ನೀಡಲು ನಿರ್ಧರಿಸಿದ್ದೇವೆ. ಇದರಿಂದಾಗಿ ಆಶಾ ಕಾರ್ಯಕರ್ತರು ಮುಷ್ಕರ ವಾಪಸ್ ಪಡೆಯುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ (ಇನ್ಸೆಂಟಿವ್ಸ್) ಸೇರಿದಂತೆ ಪ್ರತಿ ತಿಂಗಳು 10,000 ರೂ. ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ಮುಷ್ಕರ ಕೈಬಿಡಲು ಆಶಾ ಕಾರ್ಯಕರ್ತರು ಸಮ್ಮತಿಸಿದ್ದಾರೆ. ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಇನ್ನು ನಕ್ಸಲಿಸಂ ಅನ್ನು ಸಂಪೂರ್ಣ ತೊಡೆದು ಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು. ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನಾತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ಅವರು ಹೇಳಿದ್ದರು. ಅನ್ಯಾಯದ ವಿರುದ್ಧ ದನಿ ಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕೈಗೆ ಕಾನೂನು ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ತಿಳಿಸಿದರು.
Protesting Accredited Social Health Activists (ASHAs) in Karnataka withdrew their strike on Friday, following a “successful” meeting of the Karnataka Rajya Samyukta ASHA Karyakartera Sangha with Chief Minister Siddaramaiah
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm