ಬ್ರೇಕಿಂಗ್ ನ್ಯೂಸ್
11-01-25 02:11 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.11: ಅಶ್ಲೀಲ ನಿಂದನೆ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಲ್ಲಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಅನಾಮಧೇಯ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. “ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿ ಅವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ.
ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಪ್ರತಿಕ್ರಿಯೆ ನೀಡಿದ್ದು, ಅಪರಿಚಿತ ವ್ಯಕ್ತಿಗಳಿಂದ ಎಂಎಲ್ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಇದಕ್ಕೆ ಸಂಬಂಧಿಸಿ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ಹೇಳಿದರು.
ಬೆದರಿಕೆ ಪತ್ರದಲ್ಲಿ ಏನಿದೆ?
15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ, ಹುಷಾರಾಗಿ ಇರಿ ಎಂದು ಬೆದರಿಕೆ ಒಡ್ಡಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19ರಂದು ಪರಿಷತ್ನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು. ಸಚಿವೆ ವಿರುದ್ಧ ಪರಿಷತ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಜನರ ಗುಂಪೊಂದು ಸಿಟಿ ರವಿ ಮೇಲೆ ಹಲ್ಲೆ ನಡೆಸಲು ಯತ್ನಿಸಿತ್ತು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
CT Ravi receives threatening letter from anonymous person of killing him. Ravi was taken into custody after an FIR (First Information Report) was registered against him, for allegedly using derogatory remarks against Congress leader and Karnataka cabinet minister Laxmi Hebbalkar in the Legislative Council earlier in the day.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am