ಬ್ರೇಕಿಂಗ್ ನ್ಯೂಸ್
11-01-25 02:11 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.11: ಅಶ್ಲೀಲ ನಿಂದನೆ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಲ್ಲಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಅನಾಮಧೇಯ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. “ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿ ಅವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ.
ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಪ್ರತಿಕ್ರಿಯೆ ನೀಡಿದ್ದು, ಅಪರಿಚಿತ ವ್ಯಕ್ತಿಗಳಿಂದ ಎಂಎಲ್ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಇದಕ್ಕೆ ಸಂಬಂಧಿಸಿ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ಹೇಳಿದರು.
ಬೆದರಿಕೆ ಪತ್ರದಲ್ಲಿ ಏನಿದೆ?
15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ, ಹುಷಾರಾಗಿ ಇರಿ ಎಂದು ಬೆದರಿಕೆ ಒಡ್ಡಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19ರಂದು ಪರಿಷತ್ನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು. ಸಚಿವೆ ವಿರುದ್ಧ ಪರಿಷತ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಜನರ ಗುಂಪೊಂದು ಸಿಟಿ ರವಿ ಮೇಲೆ ಹಲ್ಲೆ ನಡೆಸಲು ಯತ್ನಿಸಿತ್ತು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
CT Ravi receives threatening letter from anonymous person of killing him. Ravi was taken into custody after an FIR (First Information Report) was registered against him, for allegedly using derogatory remarks against Congress leader and Karnataka cabinet minister Laxmi Hebbalkar in the Legislative Council earlier in the day.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm