ಬ್ರೇಕಿಂಗ್ ನ್ಯೂಸ್
11-01-25 10:27 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 11: ಈ ಹಿಂದೆ ನಕ್ಸಲಿಸಂ ಅನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದ ಆರು ನಕ್ಸಲರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ನಕ್ಸಲರು ಇರಿಸಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳ ನಿರಂತರ ಹುಡುಕಾಟದ ನಂತರ ಪೊಲೀಸರಿಗೆ ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಅಂತೆಯೇ ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು – 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ – 01 ದೊರೆತಿದೆ.
ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 251 (1) (ಬಿ), 7 ಮತ್ತು 25 (1ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ. ಬುಧವಾರ ಮುಖ್ಯವಾಹಿನಿಗೆ ಬಂದ ನಕ್ಸಲರು, ಅದೇ ಮೇಗೂರು ಅರಣ್ಯದಿಂದ ಹೊರ ಬಂದಿದ್ದರು. ನಕ್ಸಲರು ಶರಣಾಗುವ ಮೊದಲು ಕೊನೆಯ ಸಭೆ ನಡೆಸಿದ್ದ ಮೇಗೂರು ಅರಣ್ಯ ಪ್ರದೇಶದಲ್ಲಿ ಪೊಲೀಸ್ ತಂಡ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಕೊಪ್ಪ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿತ್ತು.
Karnataka police have tracked the cache of weapons belonging to surrendered Maoists in Meguru forest in Chikkamagaluru district of the state, sources confirmed on Saturday. The police have seized guns including AK-56, rifles, revolver, pistols and live bullets following continuous search for two days, sources said.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm