ಬ್ರೇಕಿಂಗ್ ನ್ಯೂಸ್
11-01-25 10:27 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 11: ಈ ಹಿಂದೆ ನಕ್ಸಲಿಸಂ ಅನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದ ಆರು ನಕ್ಸಲರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ನಕ್ಸಲರು ಇರಿಸಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳ ನಿರಂತರ ಹುಡುಕಾಟದ ನಂತರ ಪೊಲೀಸರಿಗೆ ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಅಂತೆಯೇ ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು – 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ – 01 ದೊರೆತಿದೆ.
ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 251 (1) (ಬಿ), 7 ಮತ್ತು 25 (1ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ. ಬುಧವಾರ ಮುಖ್ಯವಾಹಿನಿಗೆ ಬಂದ ನಕ್ಸಲರು, ಅದೇ ಮೇಗೂರು ಅರಣ್ಯದಿಂದ ಹೊರ ಬಂದಿದ್ದರು. ನಕ್ಸಲರು ಶರಣಾಗುವ ಮೊದಲು ಕೊನೆಯ ಸಭೆ ನಡೆಸಿದ್ದ ಮೇಗೂರು ಅರಣ್ಯ ಪ್ರದೇಶದಲ್ಲಿ ಪೊಲೀಸ್ ತಂಡ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಕೊಪ್ಪ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿತ್ತು.
Karnataka police have tracked the cache of weapons belonging to surrendered Maoists in Meguru forest in Chikkamagaluru district of the state, sources confirmed on Saturday. The police have seized guns including AK-56, rifles, revolver, pistols and live bullets following continuous search for two days, sources said.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm