ಬ್ರೇಕಿಂಗ್ ನ್ಯೂಸ್
14-01-25 12:32 pm HK News Desk ಕರ್ನಾಟಕ
ಬೆಳಗಾವಿ, ಜ 14 : ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗಿನ ಜಾವ ಸುಮಾರು 5 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಘಟನೆಯಲ್ಲಿ ಹೆಬ್ಬಾಳ್ಕರ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಲಕ್ಷ್ಮೀ ಹೆಬ್ಬಾಳ್ಳರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿಗೆ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಜಖಂ, ತೆರೆದುಕೊಂಡ ಏರ್ಬ್ಯಾಗ್:
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಿಂದ ಏರ್ಬ್ಯಾಗ್ಗಳು ತೆರೆದುಕೊಂಡಿರುವುದನ್ನು ಚಿತ್ರದಲ್ಲಿ ಕಾಣಬಹುದು.
ಲಕ್ಷ್ಮೀ ಹೆಬ್ಬಾಳ್ಳರ್ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದೆ. ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆನ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಆತಂಕದ ಅವಶ್ಯಕತೆ ಇಲ್ಲ- ಪುತ್ರ ಮೃಣಾಲ್: ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದು, "ತಾಯಿಯ ಬೆನ್ನಿಗೆ ಎರಡ್ಮೂರು ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ರಾತ್ರಿ ಸಿಎಲ್ಪಿ ಮೀಟಿಂಗ್ ಮುಗಿಸಿ ಬೆಳಿಗ್ಗೆ ವಿಮಾನದಲ್ಲಿ ಬರಬೇಕಾಗಿತ್ತು. ಆದರೆ, ಇಂದು ಬೆಳಗ್ಗೆ ಕ್ಷೇತ್ರದಲ್ಲಿ ಎರಡ್ಮೂರು ಮುಖ್ಯವಾದ ಕೆಲಸಗಳಿರುವ ಹಿನ್ನೆಲೆಯಲ್ಲಿ ರಸ್ತೆ ಮೂಲಕ ಆಗಮಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ದೇವರು ಮತ್ತು ಜನರ ಆಶೀರ್ವಾದದಿಂದ ದೊಡ್ಡ ಗಾಯಗಳೇನೂ ಆಗಿಲ್ಲ. ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಷೇತ್ರದ ಜನರು, ಅಭಿಮಾನಿಗಳು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ" ಎಂದು ತಿಳಿಸಿದ್ದಾರೆ.
ಹೆಬ್ಬಾಳ್ಕರ್ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯ- ವೈದ್ಯರು: ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ ಪ್ರತಿಕ್ರಿಯಿಸಿ, "ಬೆಳಗ್ಗೆ 6.15ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಇನ್ನು ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗನ್ ಮ್ಯಾನ್ ಮತ್ತು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಎರಡು ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಲಿದ್ದಾರೆ. ಆದರೆ, ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ" ಎಂದು ಮಾಹಿತಿ ನೀಡಿದರು.
The car carrying Minister Lakshmi Hebballar, who was travelling from Bengaluru to Belgaum, met with an accident at around 5 am today near Ambadagatti in Channamma's Kittur taluk. Four people, including Hebballar, were injured in the incident.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am