ಬ್ರೇಕಿಂಗ್ ನ್ಯೂಸ್
14-01-25 03:36 pm HK News Desk ಕರ್ನಾಟಕ
ಹಾಸನ, ಜ 14: ಚಾಲಕನ ನಿಯಂತ್ರಣ ತಪ್ಪಿ ಹತ್ತು ಚಕ್ರದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್ಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗುಳಗಳಲೆ ಸಮೀಪ ನಡೆದಿದೆ.
ಬಾಳ್ಳುಪೇಟೆಯ ತೌಫಿಕ್ (27) ಹಾಗೂ ಚಿತ್ರದುರ್ಗ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಬಗ್ನಾರೆಡ್ಡಿ ಗ್ರಾಮದ ಈರೇಶ್ (60) ಮೃತ ದುರ್ದೈವಿಗಳು. ಹಾಸನದಿಂದ ಮಂಗಳೂರಿಗೆ ಗೂಡ್ಸ್ ತುಂಬಿಕೊಂಡು ತೆರಳುತ್ತಿದ್ದ ವಿಆರ್ಎಲ್ ಲಾಜಿಸ್ಟಿಕ್ಸ್ ಲಾರಿ ಅತಿ ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮಹಮದ್ ಖಾದರ್ ಎಂಬವರ ಕ್ಯಾಂಟಿನ್ಗೆ ನುಗ್ಗಿದೆ.


ಕ್ಯಾಂಟಿನ್ ಬಳಿ ಹತ್ತಾರು ಮಂದಿ ಟೀ ಕುಡಿಯುತ್ತಿದ್ದು, ಇವರಲ್ಲಿ ಜೆಜೆಎಂ ಕೆಲಸ ಮಾಡಲು ಬಂದಿದ್ದ ವೀರೇಶ್ ಹಾಗೂ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ತೌಫಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟೀ ಅಂಗಡಿ ಮುಂದೆ ನಿಲ್ಲಿಸಿದ್ದ 2 ಬೈಕ್ಗಳು ಸಂಪೂರ್ಣ ಜಖಂಗೊಂಡಿವೆ. ಡಿಕ್ಕಿ ರಭಸಕ್ಕೆ ಕ್ಯಾಂಟಿನ್ ಸಂಪೂರ್ಣ ನೆಲಸಮವಾಗಿದೆ.
ಇಂದು ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದು ಮಕ್ಕಳು ಅಪಘಾತ ನಡೆದ ಸಮೀಪವೇ ಆಟವಾಡುತ್ತಿದ್ದರು. ಅಲ್ಲದೇ ಕ್ಯಾಂಟಿನ್ ಅಕ್ಕಪಕ್ಕದಲ್ಲೇ ವಾಸದ ಮನೆಗಳಿದ್ದು, ಕ್ಯಾಂಟಿನ್ ಡಿಕ್ಕಿ ಹೊಡೆದು ಲಾರಿ ಮಗುಚಿ ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Vrl truck accident at Hassan, two killed after truck rams into canteen. The deceased have been identified as Toufiq (27) and Eshwar (60).
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm