ಬ್ರೇಕಿಂಗ್ ನ್ಯೂಸ್
14-01-25 03:36 pm HK News Desk ಕರ್ನಾಟಕ
ಹಾಸನ, ಜ 14: ಚಾಲಕನ ನಿಯಂತ್ರಣ ತಪ್ಪಿ ಹತ್ತು ಚಕ್ರದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್ಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗುಳಗಳಲೆ ಸಮೀಪ ನಡೆದಿದೆ.
ಬಾಳ್ಳುಪೇಟೆಯ ತೌಫಿಕ್ (27) ಹಾಗೂ ಚಿತ್ರದುರ್ಗ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಬಗ್ನಾರೆಡ್ಡಿ ಗ್ರಾಮದ ಈರೇಶ್ (60) ಮೃತ ದುರ್ದೈವಿಗಳು. ಹಾಸನದಿಂದ ಮಂಗಳೂರಿಗೆ ಗೂಡ್ಸ್ ತುಂಬಿಕೊಂಡು ತೆರಳುತ್ತಿದ್ದ ವಿಆರ್ಎಲ್ ಲಾಜಿಸ್ಟಿಕ್ಸ್ ಲಾರಿ ಅತಿ ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮಹಮದ್ ಖಾದರ್ ಎಂಬವರ ಕ್ಯಾಂಟಿನ್ಗೆ ನುಗ್ಗಿದೆ.


ಕ್ಯಾಂಟಿನ್ ಬಳಿ ಹತ್ತಾರು ಮಂದಿ ಟೀ ಕುಡಿಯುತ್ತಿದ್ದು, ಇವರಲ್ಲಿ ಜೆಜೆಎಂ ಕೆಲಸ ಮಾಡಲು ಬಂದಿದ್ದ ವೀರೇಶ್ ಹಾಗೂ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ತೌಫಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟೀ ಅಂಗಡಿ ಮುಂದೆ ನಿಲ್ಲಿಸಿದ್ದ 2 ಬೈಕ್ಗಳು ಸಂಪೂರ್ಣ ಜಖಂಗೊಂಡಿವೆ. ಡಿಕ್ಕಿ ರಭಸಕ್ಕೆ ಕ್ಯಾಂಟಿನ್ ಸಂಪೂರ್ಣ ನೆಲಸಮವಾಗಿದೆ.
ಇಂದು ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದು ಮಕ್ಕಳು ಅಪಘಾತ ನಡೆದ ಸಮೀಪವೇ ಆಟವಾಡುತ್ತಿದ್ದರು. ಅಲ್ಲದೇ ಕ್ಯಾಂಟಿನ್ ಅಕ್ಕಪಕ್ಕದಲ್ಲೇ ವಾಸದ ಮನೆಗಳಿದ್ದು, ಕ್ಯಾಂಟಿನ್ ಡಿಕ್ಕಿ ಹೊಡೆದು ಲಾರಿ ಮಗುಚಿ ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Vrl truck accident at Hassan, two killed after truck rams into canteen. The deceased have been identified as Toufiq (27) and Eshwar (60).
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm