ಬ್ರೇಕಿಂಗ್ ನ್ಯೂಸ್
15-01-25 08:22 pm Bangalore Correspondent ಕರ್ನಾಟಕ
ಬೆಂಗಳೂರು, ಜ.16: ಮುಡಾ ನಿವೇಶನ ಹಂಚಿಕೆ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಬದಲು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 27ಕ್ಕೆ ಮುಂದೂಡಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಸಕ್ತ ಪ್ರಕರಣದ ತನಿಖಾ ವರದಿಯ ಪ್ರಗತಿಯನ್ನು ಜನವರಿ 27ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ಅರ್ಜಿದಾರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದರು.
ವಿಚಾರಣೆ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಿಂದ (ಮುಡಾ) ಮೂಲ ಕಡತಗಳು ನಾಪತ್ತೆಯಾಗಿವೆ. ಹೀಗಾಗಿ ಪಾರದರ್ಶಕವಾಗಿ ತನಿಖೆ ನಡೆಯುತ್ತಿಲ್ಲ ಎಂದು ಅರ್ಜಿದಾರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದರು. ಇದಕ್ಕೆ ಲೋಕಾಯುಕ್ತ ಕಡೆಯಿಂದ ಈತನಕ ಆಗಿರುವ ತನಿಖೆಯ ಕುರಿತ ವರದಿಯನ್ನು ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದರು.
ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ 3.16 ಎಕರೆ ಜಮೀನಿಗೆ ಬದಲಾಗಿ 50:50 ಅನುಪಾತದಲ್ಲಿ ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ವಸತಿ ಬಡಾವಣೆಗಳನ್ನು ರೂಪಿಸಲು ಸ್ವಾಧೀನಪಡಿಸಿದ್ದ ಭೂಮಿಗೆ ಬದಲಾಗಿ ಮುಡಾದಿಂದ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ ಶೇ. 50ರಷ್ಟು ನಿವೇಶನಗಳನ್ನು ಮಂಜೂರು ಮಾಡಿತ್ತು. ಈ ಬಗ್ಗೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ ದೂರಿನಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯಪಾಲರು ಪ್ರಾಸಿಕ್ಯುಶನ್ ಅನುಮತಿ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಕರ್ನಾಟಕ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿದ್ದಾರೆ. ಇದೇ ವೇಳೆ, ಮುಡಾ ಹಗರಣದಲ್ಲಿ ಭಾರೀ ಹಣ ಕೈ ಬದಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿತ್ತು.
The Karnataka High Court, on Wenesday allowed the Lokayukta to continue its investigation into the alleged Mysuru Urban Development Authority (MUDA) site allocation irregularities involving Chief Minister Siddaramaiah.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm