ಬ್ರೇಕಿಂಗ್ ನ್ಯೂಸ್
18-01-25 05:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಸೈಟ್ ಪ್ರಕರಣ ಮತ್ತಷ್ಟು ಕೊರಳು ಸುತ್ತಿಕೊಂಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಕರಣ ಸಂಬಂಧಿಸಿ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಮಾಹಿತಿ ಪ್ರಕಾರ, ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಗಳ ಒಟ್ಟು ಮೌಲ್ಯ 300 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ.
ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ಕಳೆದ ನಾಲ್ಕು ತಿಂಗಳಿನಿಂದ ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟರಾಗಿ ಕೆಲಸ ಮಾಡುವವರ ಹೆಸರಿನಲ್ಲಿ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಸ್ನೇಹಮಯಿ ಕೃಷ್ಣ ದೂರಿನಂತೆ ಇಡಿ ಎಂಟ್ರಿಯಾಗಿದ್ದು ಈಗ ಅಕ್ರಮವೆಂದು ಗುರುತಿಸಲ್ಪಟ್ಟ ಆಸ್ತಿಯನ್ನ ಜಪ್ತಿ ಮಾಡಿದೆ.
ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್ಗಳಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇಡಿ ಹೇಳಿದೆ. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳನ್ನು ಪಡೆಯಲು ರಾಜಕೀಯ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
The Enforcement Directorate (ED) has attached 142 immovable properties having a market value of ₹300 crore in connection with the Mysuru Urban Development Authority (MUDA) case against Karnataka Chief Minister Siddaramaiah, and others.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm