ಬ್ರೇಕಿಂಗ್ ನ್ಯೂಸ್
18-01-25 05:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಸೈಟ್ ಪ್ರಕರಣ ಮತ್ತಷ್ಟು ಕೊರಳು ಸುತ್ತಿಕೊಂಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಕರಣ ಸಂಬಂಧಿಸಿ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಮಾಹಿತಿ ಪ್ರಕಾರ, ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಗಳ ಒಟ್ಟು ಮೌಲ್ಯ 300 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ.
ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ಕಳೆದ ನಾಲ್ಕು ತಿಂಗಳಿನಿಂದ ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟರಾಗಿ ಕೆಲಸ ಮಾಡುವವರ ಹೆಸರಿನಲ್ಲಿ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಸ್ನೇಹಮಯಿ ಕೃಷ್ಣ ದೂರಿನಂತೆ ಇಡಿ ಎಂಟ್ರಿಯಾಗಿದ್ದು ಈಗ ಅಕ್ರಮವೆಂದು ಗುರುತಿಸಲ್ಪಟ್ಟ ಆಸ್ತಿಯನ್ನ ಜಪ್ತಿ ಮಾಡಿದೆ.
ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್ಗಳಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇಡಿ ಹೇಳಿದೆ. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳನ್ನು ಪಡೆಯಲು ರಾಜಕೀಯ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
The Enforcement Directorate (ED) has attached 142 immovable properties having a market value of ₹300 crore in connection with the Mysuru Urban Development Authority (MUDA) case against Karnataka Chief Minister Siddaramaiah, and others.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm