ಬ್ರೇಕಿಂಗ್ ನ್ಯೂಸ್
20-01-25 04:24 pm HK News Desk ಕರ್ನಾಟಕ
ಹಾಸನ, ಜ.20: ಆನ್ಲೈನ್ ಗೇಮ್ ನಲ್ಲಿ ಹಣ ಕಳಕೊಂಡು ಬೇಸತ್ತ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ.
ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದ ಉಮೇಶ್ ಎಂಬುವವರ ಒಬ್ಬನೇ ಪುತ್ರ ರಾಕೇಶ್ಗೌಡ(25) ಆತ್ಮಹತ್ಯೆಗೆ ಶರಣಾದ ಯುವಕ. ತೀರ್ಥಹಳ್ಳಿಯ ಸ್ಪಂದನಾ ಸ್ಪೂರ್ತಿ ಫೈನಾನ್ಸ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಬೇಲೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಎರಡು ವರ್ಷದಿಂದ ಆನ್ಲೈನ್ ಗೇಮ್ ಆಡಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಆ ಹಣವನ್ನು ತೀರಿಸಲು ನನ್ನಿಂದ ಆಗುತ್ತಿಲ್ಲ. ಕೊನೆಯದಾಗಿ ಈ ನಿರ್ಧಾರ ಮಾಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ಅಮ್ಮ ನನ್ನನ್ನು ಕ್ಷಮಿಸಿಬಿಡು. ಆನ್ಲೈನ್ ಗೇಮ್ನಿಂದಾಗಿ ಫೈನಾನ್ಸ್ನಲ್ಲಿ ಒಂದು ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೇನೆ ಎಂದು ಚೀಟಿ ಬರೆದಿಟ್ಟಿದ್ದಾನೆ.
ಆ ಹಣವನ್ನು ನಮ್ಮ ತಾಯಿಯ ಬಳಿ ಕೇಳಬಾರದು. ನನ್ನ ಸಾವಿನ ಸುದ್ದಿಯನ್ನು ನೇರವಾಗಿ ನನ್ನ ತಾಯಿಗೆ ಹೇಳಬೇಡಿ. ನಾನು ಸಾವಿನ ನಂತರ ನನ್ನ ಕಣ್ಣನ್ನು ದಾನ ಮಾಡಿ. ಬಸವರಾಜು ಅವರ ಹತ್ತಿರ ಐವತ್ತು ಸಾವಿರ ಸಾಲ ಮಾಡಿದ್ದೇನೆ, ನಿಮಗೆ ಕೊಡಲು ಆಗಲಿಲ್ಲ ಕ್ಷಮಿಸಿ. ನನ್ನ ಬೈಕ್ ಮಾರಟವಾದರೆ ಹಣ ತಲುಪುತ್ತದೆ. ನನ್ನ ಶವವನ್ನು ಚೀಕನಹಳ್ಳಿಗೆ ತೆಗೆದುಕೊಂಡು ಹೋಗಬೇಡಿ, ಬೇಲೂರು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ. ಅಮ್ಮ, ಕುಟುಂಬಸ್ಥರೇ ನನ್ನನ್ನು ಕ್ಷಮಿಸಿಬಿಡಿ I MISS YOU AMMA.. ನನ್ನ ಅಂತಿಮ ದರ್ಶನಕ್ಕೆ ಬೇಲೂರು ಶಾಸಕರು ಬರಬೇಕು. ಆನ್ಲೈನ್ ಗೇಮ್ ನನ್ನ ಜೀವನವನ್ನು ತೆಗೆದುಬಿಡ್ತು ಎಂದು ನೋವು ಹೇಳಿಕೊಂಡಿದ್ದಾನೆ.
25 year old youth commits suicide after losing money in online game after huge loan in Hassan. The Deceased has been identified as Ramesh Gowda. He was working at finance company.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am