ಬ್ರೇಕಿಂಗ್ ನ್ಯೂಸ್
20-01-25 04:24 pm HK News Desk ಕರ್ನಾಟಕ
ಹಾಸನ, ಜ.20: ಆನ್ಲೈನ್ ಗೇಮ್ ನಲ್ಲಿ ಹಣ ಕಳಕೊಂಡು ಬೇಸತ್ತ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ.
ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದ ಉಮೇಶ್ ಎಂಬುವವರ ಒಬ್ಬನೇ ಪುತ್ರ ರಾಕೇಶ್ಗೌಡ(25) ಆತ್ಮಹತ್ಯೆಗೆ ಶರಣಾದ ಯುವಕ. ತೀರ್ಥಹಳ್ಳಿಯ ಸ್ಪಂದನಾ ಸ್ಪೂರ್ತಿ ಫೈನಾನ್ಸ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಬೇಲೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಎರಡು ವರ್ಷದಿಂದ ಆನ್ಲೈನ್ ಗೇಮ್ ಆಡಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಆ ಹಣವನ್ನು ತೀರಿಸಲು ನನ್ನಿಂದ ಆಗುತ್ತಿಲ್ಲ. ಕೊನೆಯದಾಗಿ ಈ ನಿರ್ಧಾರ ಮಾಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ಅಮ್ಮ ನನ್ನನ್ನು ಕ್ಷಮಿಸಿಬಿಡು. ಆನ್ಲೈನ್ ಗೇಮ್ನಿಂದಾಗಿ ಫೈನಾನ್ಸ್ನಲ್ಲಿ ಒಂದು ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೇನೆ ಎಂದು ಚೀಟಿ ಬರೆದಿಟ್ಟಿದ್ದಾನೆ.
ಆ ಹಣವನ್ನು ನಮ್ಮ ತಾಯಿಯ ಬಳಿ ಕೇಳಬಾರದು. ನನ್ನ ಸಾವಿನ ಸುದ್ದಿಯನ್ನು ನೇರವಾಗಿ ನನ್ನ ತಾಯಿಗೆ ಹೇಳಬೇಡಿ. ನಾನು ಸಾವಿನ ನಂತರ ನನ್ನ ಕಣ್ಣನ್ನು ದಾನ ಮಾಡಿ. ಬಸವರಾಜು ಅವರ ಹತ್ತಿರ ಐವತ್ತು ಸಾವಿರ ಸಾಲ ಮಾಡಿದ್ದೇನೆ, ನಿಮಗೆ ಕೊಡಲು ಆಗಲಿಲ್ಲ ಕ್ಷಮಿಸಿ. ನನ್ನ ಬೈಕ್ ಮಾರಟವಾದರೆ ಹಣ ತಲುಪುತ್ತದೆ. ನನ್ನ ಶವವನ್ನು ಚೀಕನಹಳ್ಳಿಗೆ ತೆಗೆದುಕೊಂಡು ಹೋಗಬೇಡಿ, ಬೇಲೂರು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ. ಅಮ್ಮ, ಕುಟುಂಬಸ್ಥರೇ ನನ್ನನ್ನು ಕ್ಷಮಿಸಿಬಿಡಿ I MISS YOU AMMA.. ನನ್ನ ಅಂತಿಮ ದರ್ಶನಕ್ಕೆ ಬೇಲೂರು ಶಾಸಕರು ಬರಬೇಕು. ಆನ್ಲೈನ್ ಗೇಮ್ ನನ್ನ ಜೀವನವನ್ನು ತೆಗೆದುಬಿಡ್ತು ಎಂದು ನೋವು ಹೇಳಿಕೊಂಡಿದ್ದಾನೆ.
25 year old youth commits suicide after losing money in online game after huge loan in Hassan. The Deceased has been identified as Ramesh Gowda. He was working at finance company.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm