ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm