ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am