ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am