ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am