ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm