ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm