ಬ್ರೇಕಿಂಗ್ ನ್ಯೂಸ್
16-12-20 10:44 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿ ಮೇಲ್ಮನೆಯಲ್ಲಿ ನಡೆದ ಗದ್ದಲಕ್ಕೆ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ. ಈ ರೀತಿಯ ಗೂಂಡಾಗಿರಿ ಪ್ರಜಾಪ್ರಭುತ್ವಕ್ಕೆ ಮಾರಕ. ಸದನಕ್ಕೆ ಸಭಾಪತಿ ಆಗಮಿಸದಂತೆ ತಡೆಯೊಡ್ಡಿದ್ದು ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಸಭಾಪತಿ ಇರುವಾಗ ಪೀಠದಲ್ಲಿ ಉಪ ಸಭಾಪತಿ ಆಸೀನರಾಗುವಂತಿಲ್ಲ. ಅವರಿಗೆ ಸಮಸ್ಯೆ ಇದ್ದಾಗ ಅಥವಾ ಸಭಾಪತಿ ಸೂಚನೆ ಮೇರೆಗೆ ಉಪಸಭಾಪತಿ ಪೀಠದಲ್ಲಿ ಆಸೀನರಾಗಿ ಕಲಾಪ ನಡೆಸಬೇಕು. ಆದರೆ, ಮಂಗಳವಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಉಪ ಸಭಾಪತಿಯೇ ಪೀಠದಲ್ಲಿ ಕುಳಿತಿದ್ದರು. ಇದು ಕಲಾಪ ನಿಯಮಾವಳಿಗೆ ವಿರುದ್ಧ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ನಡೆ ನೋಡಿ ಮುಂದಿನ ತೀರ್ಮಾನ
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಪರಿಷತ್ ಗದ್ದಲಕ್ಕೆ ಸಂಬಂಧಿಸಿ ರಾಜ್ಯಪಾಲರು ಕೈಗೊಳ್ಳುವ ತೀರ್ಮಾನವನ್ನು ನೋಡಿಕೊಂಡು ಕಾಂಗ್ರೆಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ದೂರಿದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm