ಬ್ರೇಕಿಂಗ್ ನ್ಯೂಸ್
16-12-20 10:44 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿ ಮೇಲ್ಮನೆಯಲ್ಲಿ ನಡೆದ ಗದ್ದಲಕ್ಕೆ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ. ಈ ರೀತಿಯ ಗೂಂಡಾಗಿರಿ ಪ್ರಜಾಪ್ರಭುತ್ವಕ್ಕೆ ಮಾರಕ. ಸದನಕ್ಕೆ ಸಭಾಪತಿ ಆಗಮಿಸದಂತೆ ತಡೆಯೊಡ್ಡಿದ್ದು ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಸಭಾಪತಿ ಇರುವಾಗ ಪೀಠದಲ್ಲಿ ಉಪ ಸಭಾಪತಿ ಆಸೀನರಾಗುವಂತಿಲ್ಲ. ಅವರಿಗೆ ಸಮಸ್ಯೆ ಇದ್ದಾಗ ಅಥವಾ ಸಭಾಪತಿ ಸೂಚನೆ ಮೇರೆಗೆ ಉಪಸಭಾಪತಿ ಪೀಠದಲ್ಲಿ ಆಸೀನರಾಗಿ ಕಲಾಪ ನಡೆಸಬೇಕು. ಆದರೆ, ಮಂಗಳವಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಉಪ ಸಭಾಪತಿಯೇ ಪೀಠದಲ್ಲಿ ಕುಳಿತಿದ್ದರು. ಇದು ಕಲಾಪ ನಿಯಮಾವಳಿಗೆ ವಿರುದ್ಧ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ನಡೆ ನೋಡಿ ಮುಂದಿನ ತೀರ್ಮಾನ
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಪರಿಷತ್ ಗದ್ದಲಕ್ಕೆ ಸಂಬಂಧಿಸಿ ರಾಜ್ಯಪಾಲರು ಕೈಗೊಳ್ಳುವ ತೀರ್ಮಾನವನ್ನು ನೋಡಿಕೊಂಡು ಕಾಂಗ್ರೆಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ದೂರಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm