ಬ್ರೇಕಿಂಗ್ ನ್ಯೂಸ್
16-12-20 10:44 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿ ಮೇಲ್ಮನೆಯಲ್ಲಿ ನಡೆದ ಗದ್ದಲಕ್ಕೆ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ. ಈ ರೀತಿಯ ಗೂಂಡಾಗಿರಿ ಪ್ರಜಾಪ್ರಭುತ್ವಕ್ಕೆ ಮಾರಕ. ಸದನಕ್ಕೆ ಸಭಾಪತಿ ಆಗಮಿಸದಂತೆ ತಡೆಯೊಡ್ಡಿದ್ದು ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಸಭಾಪತಿ ಇರುವಾಗ ಪೀಠದಲ್ಲಿ ಉಪ ಸಭಾಪತಿ ಆಸೀನರಾಗುವಂತಿಲ್ಲ. ಅವರಿಗೆ ಸಮಸ್ಯೆ ಇದ್ದಾಗ ಅಥವಾ ಸಭಾಪತಿ ಸೂಚನೆ ಮೇರೆಗೆ ಉಪಸಭಾಪತಿ ಪೀಠದಲ್ಲಿ ಆಸೀನರಾಗಿ ಕಲಾಪ ನಡೆಸಬೇಕು. ಆದರೆ, ಮಂಗಳವಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಉಪ ಸಭಾಪತಿಯೇ ಪೀಠದಲ್ಲಿ ಕುಳಿತಿದ್ದರು. ಇದು ಕಲಾಪ ನಿಯಮಾವಳಿಗೆ ವಿರುದ್ಧ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ನಡೆ ನೋಡಿ ಮುಂದಿನ ತೀರ್ಮಾನ
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಪರಿಷತ್ ಗದ್ದಲಕ್ಕೆ ಸಂಬಂಧಿಸಿ ರಾಜ್ಯಪಾಲರು ಕೈಗೊಳ್ಳುವ ತೀರ್ಮಾನವನ್ನು ನೋಡಿಕೊಂಡು ಕಾಂಗ್ರೆಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ದೂರಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm