ಬ್ರೇಕಿಂಗ್ ನ್ಯೂಸ್
22-01-25 06:29 pm Bangalore Correspondent ಕರ್ನಾಟಕ
ಬೆಂಗಳೂರು, ಜ.22: ತನ್ನ ಒಂದು ಕಾಲದ ಸ್ನೇಹಿತ, ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧವೇ ಮಾಜಿ ಸಚಿವ, ಬಿಜೆಪಿ ಮುಖಂಡ ಶ್ರೀರಾಮುಲು ವಾಗ್ದಾಳಿ ನಡೆಸಿದ್ದು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಅಪಸ್ವರ ಎದ್ದಿರುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಕ್ಕಾಗಿ ರಾಜ್ಯಕ್ಕೆ ಬಂದಿರುವ ಪಕ್ಷದ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಜ.21ರ ಸಂಜೆ ಕೋರ್ ಕಮಿಟಿ ಸಭೆ ನಡೆಸಿದ್ದರು. ಸಭೆಯಲ್ಲಿ ಸಂಡೂರು ವಿಧಾನಸಭೆ ಉಪ ಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದೆ. ಈ ವೇಳೆ ನೀವು ಸರಿಯಾಗಿ ಕೆಲಸ ಮಾಡದೇ ಇದ್ದ ಕಾರಣಕ್ಕೆ ಸೋಲಾಗಿದೆ ಎಂದು ಶ್ರೀರಾಮುಲು ವಿರುದ್ಧವೇ ರಾಧಾ ಮೋಹನ್ ದಾಸ್ ಗಂಭೀರ ಆರೋಪ ಮಾಡಿದ್ದಾರೆ.
ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಚುನಾವಣೆ ಸೋಲಿನ ಕುರಿತಾಗಿ ಇನ್ನೂ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ನೇತೃತ್ವದಲ್ಲಿ ಸಮಿತಿ ನೇಮಿಸಿದ್ದರೂ, ವರದಿ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತೀರಿ ಎಂದು ಶ್ರೀರಾಮುಲು ಸಭೆಯಲ್ಲೇ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, ಉಪ ಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದಿದ್ದಾರೆ.
ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ಅವರು ಉತ್ತರಪ್ರದೇಶ ರಾಜ್ಯದವರು. ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳಿರೋದು ಸ್ಪಷ್ಟವಾಗಿದೆ ಎಂದರು.
ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮುಲು ತನ್ನ ಹಳೆ ಸ್ನೇಹಿತನ ವಿರುದ್ಧ ಕಿಡಿಕಾರಿದರು.
Janardhana Reddy is trying to destroy my political career says friend Sreeramulu. The state BJP Core Committee has decided to send three names from each district for the district president post, keeping social justice in mind. The committee meeting was attended by BJP state president BY Vijayendra, former CMs Sadananda Gowda and Basavaraj Bommai, B Sriramulu and others in Bengaluru on Tuesday.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm