ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm