ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm