ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm