ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm