ಬ್ರೇಕಿಂಗ್ ನ್ಯೂಸ್
25-01-25 02:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಬಿಜೆಪಿಯೊಳಗೆ ಬಣ ಸಂಘರ್ಷ ತಾರಕಕ್ಕೇರಿದ್ದರೆ, ಇತ್ತ ಕಾಂಗ್ರೆಸ್ ಒಳಗಡೆಯೂ ಪಕ್ಷದ ನಾಯಕರು, ಲೋಕಸಭೆ ಸೋತ ಅಭ್ಯರ್ಥಿಗಳು ಅಸಮಾಧಾನಗೊಂಡು ಪ್ರತ್ಯೇಕ ಸಭೆ ನಡೆಸಿದ್ದಾರೆ. ಪಕ್ಷ ಹಾಗೂ ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆದಿದ್ದು, ಸರ್ಕಾರ ಮತ್ತು ಪಕ್ಷದೊಳಗಿನ ಆಗುಹೋಗುಗಳ ಕುರಿತು ಚರ್ಚೆ ನಡೆಸಿದರು.
ಇದೇ ವೇಳೆ, ಜನವರಿ 30 ರಂದು ನಡೆಯಲಿರುವ ಸಂಪುಟ ಸಭೆಗೂ ಮುನ್ನ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳಿಗೆ ಹೋಲಿಸಿದರೆ ನಮಗೆ ಪ್ರಾಮುಖ್ಯತೆಯನ್ನು ನೀಡುತ್ತಿಲ್ಲ. ಆಯಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಾಜಿತ ಅಭ್ಯರ್ಥಿಗಳಿಗಿಂತ ದುಪ್ಪಟ್ಟು ಮತ ಪಡೆದರೂ ನಮ್ಮನ್ನು ಕಡೆಗಣಿಸಲಾಗುತ್ತಿದೆ. ನಮ್ಮ ಲೆಟರ್ ಹೆಡ್ಗಳನ್ನು ಪರಿಗಣಿಸುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೂ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಂಸದರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ಪಕ್ಷದ ಸಂಘಟನೆಯಲ್ಲು ನಮ್ಮನ್ನು ಪರಿಗಣಿಸುತ್ತಿಲ್ಲ. ನಿಗಮ -ಮಂಡಳಿ ನೇಮಕಾತಿ ಸೇರಿದಂತೆ ಯಾವುದೇ ಹುದ್ದೆ ಅಥವಾ ಸ್ಥಾನಮಾನವನ್ನು ಕೇಳುತ್ತಿಲ್ಲ. ಆದರೆ, ಪಕ್ಷದ ವಿಚಾರದಲ್ಲಿ ನಮಗೆ ಆದ್ಯತೆ ಬೇಕು. ಈ ವಿಚಾರವನ್ನು ಸಿಎಂ ಹಾಗೂ ಡಿಸಿಎಂ ಅವರ ಗಮನಕ್ಕೆ ತರುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದ್ದಾರೆ. ಸ್ಥಳೀಯ ಮತ್ತು ರಾಜ್ಯ ಚುನಾವಣೆಗಳಲ್ಲಿ ನಮ್ಮ ಪಾತ್ರವೇನು ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ. ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಪರಾಜಿತ ಲೋಕಸಭೆ ಅಭ್ಯರ್ಥಿಗಳಾದ ಮೃಣಾಲ್ ಹೆಬ್ಬಾಳ್ಕರ್, ಸಂಯುಕ್ತಾ ಪಾಟೀಲ್, ಸ್ಟಾರ್ ಚಂದ್ರು, ಎಸ್.ಪಿ.ಮುದ್ದಹನುಮೇಗೌಡ, ಪ್ರೊ.ರಾಜೇಗೌಡ, ಮನ್ಸೂರ್ ಅಲಿಖಾನ್, ಕೆ.ಜಯಪ್ರಕಾಶ್ ಹೆಗ್ಡೆ, ರಾಜು ಆಲಗೂರು ಸೇರಿದಂತೆ ಇನ್ನಿತರರು ಇದ್ದರು.
Miffed with their party and the state government ignoring them, the Congress candidates who lost the 2024 Lok Sabha polls held a meeting under the leadership of former Bengaluru Rural MP DK Suresh, the younger brother of DCM and KPCC president DK Shivakumar, at a hotel here on Friday.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am