ಬ್ರೇಕಿಂಗ್ ನ್ಯೂಸ್
26-01-25 10:57 pm HK News Desk ಕರ್ನಾಟಕ
ಬೆಳಗಾವಿ, ಜ.26: 2028ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಲಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವುದು ಎಲ್ಲರ ಜವಾಬ್ದಾರಿ. ನಾನು 2028ಕ್ಕೆ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಆಗುತ್ತೇನೆಂದು ಹೇಳಿಲ್ಲ. ಸಿಎಂ ಮಾಡುವುದು, ಬಿಡುವುದು ಹೈಕಮಾಂಡ್'ಗೆ ಬಿಟ್ಟ ವಿಚಾರ. ಸರ್ಕಾರ ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದ್ದೇ ಇದೆ. ಅದರಲ್ಲಿ ನಾನೂ ಪಾಲುದಾರ, ಭಾಗಿದಾರ ಅಷ್ಟೇ ಎಂದು ಹೇಳಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ವೈಮನಸ್ಸು ಹೊಂದಿದ್ದಾರೆಂಬ ಸುದ್ದಿಗಳ ಕುರಿತು ಮಾತನಾಡಿದ ಅವರು, ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಸೇರಿ ಅತ್ಯಂತ ಯಶಸ್ವಿ ಕಾರ್ಯಕ್ರಮ ಮಾಡಿದ್ದೇವೆ. ಮುನಿಸು ಎನ್ನುವ ಪ್ರಶ್ನೆಯೇ ಬರುವುದಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆಗೆ ಹೈಕಮಾಂಡ್ ಉತ್ತರಿಸಬೇಕು. ಅದರ ಬಗ್ಗೆ ಏನನ್ನೂ ಹೇಳುವ ಅಧಿಕಾರ ನನಗಿಲ್ಲ ಎಂದರು. ಬಿಜೆಪಿ ಮುಖಂಡ ಶ್ರೀರಾಮುಲು ಅವರು ಕಾಂಗ್ರೆಸ್ಗೆ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಎಲ್ಲರಿಗೂ ಸ್ವಾಗತವಿದೆ. ನಾನು ಶ್ರೀರಾಮುಲು ಅವರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ, ರಾಜಕೀಯವಾಗಿ ಅಲ್ಲ, ಪಕ್ಷಕ್ಕೆ ಸೇರುವುದು ಅವರಿಗೆ ಬಿಟ್ಟದ್ದು, ಶ್ರೀರಾಮುಲು ಅವರನ್ನು ಕಾಂಗ್ರೆಸ್ಗೆ ಕರೆತರಲು ಶಿವಕುಮಾರ್ ಪ್ರಯತ್ನ ನಡೆಸುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.
I am going to be the CM candidate for 2028. Minister Satish Jarkiholi has expressed hope that the Congress will come back to power in the state.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm