ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm