ಬ್ರೇಕಿಂಗ್ ನ್ಯೂಸ್
27-01-25 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜ 27: ಇಲ್ಲಿನ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕ್ಟ್ರಿಕಲ್ ವಾಹನಗಳ ಶೋ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡು, ಸುಮಾರು 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಅಗ್ನಿಗೆ ಆಹುತಿಯಾಗಿದ್ದೆ.
ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಒಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೂ ರೂಮ್ನಲ್ಲಿ ಇಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷರ್ಣಾಧದಲ್ಲಿ ಅಗ್ನಿ ವ್ಯಾಪ್ತಿಸಿ ಅನಾಹುತ ಸಂಭವಿಸಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೈಕ್ ಶೂ ರೂಮ್ನಲ್ಲಿ ಎಂದಿನಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಸಿಬ್ಬಂದಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ಆರ್ಟಿಓ ಅಧಿಕಾರಿಗಳು ಶೋ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಲವು ಲೋಪದೋಷ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. 250 ವ್ಯಾಟ್ ಬ್ಯಾಟರಿ ಬಳಕೆಯ 25 ಕಿ.ಮೀ ವೇಗದ ವಾಹನಗಳಿಗೆ ಮಾತ್ರ ಪರವಾನಗಿ ಪಡೆಯಲಾಗಿತ್ತು. ಆದರೆ ಶೋ ರೂಮ್ನಲ್ಲಿ ನಿಗದಿಗಿಂತ ಹೆಚ್ಚು ಸಾಮರ್ಥ್ಯ ಬಳಕೆಯ ಬ್ಯಾಟರಿ ಬಳಸುತ್ತಿರುವುದು ಕಂಡುಬಂದಿತ್ತು. ಈ ಬಗ್ಗೆ ವರದಿಯನ್ನು ಸಿದ್ಧಪಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಟರಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದು, ಅಗ್ನಿ ಆರಿದ ನಂತರ ಪರಿಶೀಲಿಸಿದ ಬಳಿಕ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ನ.19ರಂದು ರಾಜಾಜಿನಗರ ರಸ್ತೆಯಲ್ಲಿ ಮೈ ಇವಿ ಶೋ ರೂಮ್ನಲ್ಲಿಯೂ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಶೋ ರೂಮ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಸಜೀವ ದಹನವಾಗಿದ್ದಳು. ದುರಂತದಲ್ಲಿ 25ಕ್ಕಿಂತ ಹೆಚ್ಚು ಇವಿ ಬೈಕ್ಗಳು ಬೆಂಕಿಗಾಹುತಿಯಾಗಿದ್ದವು.
A fire broke out at the Okinawa electric bike showroom on Rajkumar Road in Rajajinagar, Bengaluru on Monday. Visuals from the scene showed that most of the electric bikes displayed in the showroom were gutted in the flames and significantly damaged.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm