ಬ್ರೇಕಿಂಗ್ ನ್ಯೂಸ್
27-01-25 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜ 27: ಇಲ್ಲಿನ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕ್ಟ್ರಿಕಲ್ ವಾಹನಗಳ ಶೋ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡು, ಸುಮಾರು 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಅಗ್ನಿಗೆ ಆಹುತಿಯಾಗಿದ್ದೆ.
ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಒಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೂ ರೂಮ್ನಲ್ಲಿ ಇಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷರ್ಣಾಧದಲ್ಲಿ ಅಗ್ನಿ ವ್ಯಾಪ್ತಿಸಿ ಅನಾಹುತ ಸಂಭವಿಸಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೈಕ್ ಶೂ ರೂಮ್ನಲ್ಲಿ ಎಂದಿನಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಸಿಬ್ಬಂದಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ಆರ್ಟಿಓ ಅಧಿಕಾರಿಗಳು ಶೋ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಲವು ಲೋಪದೋಷ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. 250 ವ್ಯಾಟ್ ಬ್ಯಾಟರಿ ಬಳಕೆಯ 25 ಕಿ.ಮೀ ವೇಗದ ವಾಹನಗಳಿಗೆ ಮಾತ್ರ ಪರವಾನಗಿ ಪಡೆಯಲಾಗಿತ್ತು. ಆದರೆ ಶೋ ರೂಮ್ನಲ್ಲಿ ನಿಗದಿಗಿಂತ ಹೆಚ್ಚು ಸಾಮರ್ಥ್ಯ ಬಳಕೆಯ ಬ್ಯಾಟರಿ ಬಳಸುತ್ತಿರುವುದು ಕಂಡುಬಂದಿತ್ತು. ಈ ಬಗ್ಗೆ ವರದಿಯನ್ನು ಸಿದ್ಧಪಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಟರಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದು, ಅಗ್ನಿ ಆರಿದ ನಂತರ ಪರಿಶೀಲಿಸಿದ ಬಳಿಕ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ನ.19ರಂದು ರಾಜಾಜಿನಗರ ರಸ್ತೆಯಲ್ಲಿ ಮೈ ಇವಿ ಶೋ ರೂಮ್ನಲ್ಲಿಯೂ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಶೋ ರೂಮ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಸಜೀವ ದಹನವಾಗಿದ್ದಳು. ದುರಂತದಲ್ಲಿ 25ಕ್ಕಿಂತ ಹೆಚ್ಚು ಇವಿ ಬೈಕ್ಗಳು ಬೆಂಕಿಗಾಹುತಿಯಾಗಿದ್ದವು.
A fire broke out at the Okinawa electric bike showroom on Rajkumar Road in Rajajinagar, Bengaluru on Monday. Visuals from the scene showed that most of the electric bikes displayed in the showroom were gutted in the flames and significantly damaged.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm