ಬ್ರೇಕಿಂಗ್ ನ್ಯೂಸ್
27-01-25 06:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.27: ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮಕ್ಕೆ ಅದ್ಧೂರಿ ತೆರೆಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಗ್ರ್ಯಾಂಡ್ ಫಿನಾಲೆ ಮುಕ್ತಾಯವಾಗಿದ್ದು, ವಿಜೇತರಾಗಿ ಹೊರಹೊಮ್ಮಿದ್ದಾರೆ ಕುರಿಗಾಹಿ ಹನುಮಂತ ಲಮಾಣಿ. ರೆಕ್ಕೆಗಳನ್ನೊಳಗೊಂಡ ಬಿಬಿಕೆ 11 ವಿನ್ನರ್ ಟ್ರೋಫಿ ಹಳ್ಳಿಹಕ್ಕಿ ಹನುಮಂತ ಲಮಾಣಿ ಪಾಲಾಗಿದೆ.
‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ವಿನ್ನರ್ ಆದ ಹನುಮಂತ ಲಮಾಣಿಗೆ ಒಟ್ಟು 5,23,89,318 ವೋಟ್ಸ್ ಬಿದ್ದಿವೆ. ‘ಬಿಗ್ ಬಾಸ್ ಕನ್ನಡ’ ಇತಿಹಾಸದ ಇಷ್ಟೂ ಸೀಸನ್ಗಳಲ್ಲಿ ವಿನ್ನರ್ಗೆ ಇಷ್ಟೊಂದು ವೋಟ್ಸ್ ಬಿದ್ದಿರೋದು ಇದೇ ಮೊದಲು!
ಹಾಗ್ನೋಡಿದ್ರೆ, ‘ಬಿಗ್ ಬಾಸ್’ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ (ಮೈಲ್ಡ್ ಕಾರ್ಡ್ ಸ್ಪರ್ಧಿ) ಆಗಿ ಬಂದವರು ಹನುಮಂತ ಲಮಾಣಿ. ‘ಬಿಗ್ ಬಾಸ್ ಕನ್ನಡ’ ಇತಿಹಾಸದಲ್ಲಿಯೇ ಓರ್ವ ವೈಲ್ಡ್ ಕಾರ್ಡ್ ಸ್ಪರ್ಧಿ ವಿನ್ನರ್ ಆಗಿರೋದು ಇದೇ ಮೊದಲು! ಆ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಹನುಮಂತ ಲಮಾಣಿ. ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದರೂ ವಿನ್ನರ್ ಆಗಬಹುದು ಅಂತ ಹನುಮಂತ ಲಮಾಣಿ ತೋರಿಸಿಕೊಟ್ಟಿದ್ದಾರೆ.
ಇನ್ನು ಗೆಲುವನ್ನು ಸಂಭ್ರಮಿಸಬೇಕಿದ್ದ ಕನ್ನಡ ಬಿಗ್ ಬಾಸ್ 11ರ ವಿಜೇತನ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.




ಸವಣೂರು ತಾಲೂಕು ಚಿಲ್ಲೂರುಬಡ್ನಿಯಲ್ಲಿ ಹನುಮಂತನ ಮನೆ ಇದೆ. ಇಂದು ಇಲ್ಲಿ ಸಂತಸ ತುಂಬಿರಬೇಕಿತ್ತು. ಆದರೆ ಹನುಮಂತು ಬಿಗ್ ಬಾಸ್ ಟ್ರೋಫಿ ಎತ್ತಿಹಿಡಿಯುವ ಮುನ್ನವೇ ಅವರ ಚಿಕ್ಕಪ್ಪ ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯಕ್ರಿಯೆ ಕೂಡ ಮುಗಿದಿದೆ. ಹನುಮಂತನ ನೋಡಲು ಊರಿಗೆ ಆಗಮಿಸುತ್ತಿರುವ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ.
ಹನುಮಂತನ ಗೆಲುವನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ ಮನೆ ಸದಸ್ಯರು ಬೆಂಗಳೂರಿಗೆ ಬಂದಿದ್ದರು. ಹೀಗಾಗಿ, ಮನೆಯಲ್ಲಿ ಹನುಮಂತನ ಮಾವ ಮತ್ತು ಅತ್ತಿಗೆ ಮಾತ್ರವಿದ್ದಾರೆ. ಸೂತಕ ಮುಗಿಯುವವರೆಗೆ ಯಾವುದೇ ಸಂಭ್ರಮಾಚರಣೆ ಮಾಡದಿರಲು ಹನುಮಂತನ ಸಂಬಂಧಿಕರು ನಿರ್ಧರಿಸಿದ್ದಾರೆ.
ಮೂರು ದಿನದ ಕಾರ್ಯ ಮುಗಿದ ಬಳಿಕ ಅಭಿಮಾನಿಗಳು ಭೇಟಿ ನೀಡಬಹುದು. ಸದ್ಯ ಬೆಂಗಳೂರಿನಲ್ಲಿ ಇರುವ ಹನುಮಂತನ ಕುಟುಂಬಸ್ಥರು ಇವತ್ತು ರಾತ್ರಿ ಅಥವಾ ನಾಳೆ ಬರುವ ಸಾಧ್ಯತೆ ಇದೆ.

ರನ್ನರ್ ಅಪ್ ತ್ರಿವಿಕ್ರಮ್! ;
‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಮೊದಲ ದಿನದಿಂದಲೂ ಇದ್ದು ಎಲ್ಲಾ ಪ್ರೆಶರ್ಗಳನ್ನ ಹ್ಯಾಂಡಲ್ ಮಾಡಿ, ಸವಾಲುಗಳನ್ನ ಎದುರಿಸಿದವರು ತ್ರಿವಿಕ್ರಮ್. ಟಾಸ್ಕ್ಗಳಲ್ಲಿ ಉತ್ತಮ ಪರ್ಫಾಮೆನ್ಸ್ ನೀಡುತ್ತಿದ್ದ ತ್ರಿವಿಕ್ರಮ್ ವಿನ್ನರ್ ಆಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ತ್ರಿವಿಕ್ರಮ್ಗೆ ಹೋಲಿಸಿದರೆ ಹನುಮಂತಗೆ ಹೆಚ್ಚು ವೋಟ್ಸ್ ಲಭಿಸಿವೆ. ಹೀಗಾಗಿ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ. ಅಂದ್ಹಾಗೆ, ರನ್ನರ್ ಅಪ್ ತ್ರಿವಿಕ್ರಮ್ಗೆ 2 ಕೋಟಿಗೂ ಅಧಿಕ ವೋಟ್ಸ್ ಬಿದ್ದಿವೆ.
Hanumantha Lamani, a wildcard entrant, became the winner of the Bigg Boss Kannada 11 Grand Finale title. He also took home a cash prize of Rs 50 lakh. Trivikram was declared the first runner-up and Rajath the second runner-up of BB Season- 11.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm