ಬ್ರೇಕಿಂಗ್ ನ್ಯೂಸ್
29-01-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಜ.29: ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
13 year old boy commits suicide over mobile use in Bangalore. The deceased has been identified as Dhruva. He hang himself while his little sister was in the same room.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm