ಬ್ರೇಕಿಂಗ್ ನ್ಯೂಸ್
29-01-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಜ.29: ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
13 year old boy commits suicide over mobile use in Bangalore. The deceased has been identified as Dhruva. He hang himself while his little sister was in the same room.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm