ಬ್ರೇಕಿಂಗ್ ನ್ಯೂಸ್
29-01-25 02:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಕನ್ನಡಿಗರು ಕೂಡ ಸಿಲುಕಿಕೊಂಡಿದ್ದಾರೆ. ಬೆಳಗಾವಿಯಿಂದ ಖಾಸಗಿ ಬಸ್ನಲ್ಲಿ ಮೂವತ್ತು ಜನರ ತಂಡ ಪ್ರಯಾಗರಾಜ್ಗೆ ಹೋಗಿತ್ತು. ಈ ಪೈಕಿ ಕಾಲ್ತುಳಿತದ ಬಳಿಕ ಐವರು ನಾಪತ್ತೆ ಆಗಿದ್ದಾರೆ.
ಬೆಳಗಾವಿ ನಗರದ ಶೆಟ್ಟಿಗಲ್ಲಿಯ ದಂಪತಿ ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ. ಚದುರಿ ಹೋಗಿದ್ದ ಇಬ್ಬರಿಗೂ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
.jpg?$p=5c9056e&f=16x10&w=852&q=0.8)


ಕಾಲ್ತುಳಿತದ ಭೀಕರತೆಯನ್ನು ಕನ್ನಡತಿ ಸರೋಜಿನಿ ಎಂಬಾಕೆ ಬಿಚ್ಚಿಟ್ಟಿದ್ದಾರೆ. ಎರಡು ಬಸ್ನಲ್ಲಿ 60 ಜನ ಬಂದಿದ್ದೆವು. 9 ಜನ ಸ್ನಾನ ಮಾಡುವುದಕ್ಕೆ ಹೋದಾಗ ಕಾಲ್ತುಳಿತ ಸಂಭವಿಸಿತು. ತಪ್ಪಿಸಿಕೊಳ್ಳಲು ನಮಗೆ ಯಾವುದೇ ದಾರಿಯೇ ಸಿಕ್ಕಿಲ್ಲ ಎಂದಿದ್ದಾರೆ.
ಬೆಂಗಳೂರಿನ ಉಮೇಶ್ ಈ ಬಗ್ಗೆ ಮಾತನಾಡಿದ್ದು, ಗಾಯ ಆಗಿದೆ, ಆಸ್ಪತ್ರೆಗೆ ಹೋಗಿ ಬಂದಿದ್ದೇನೆ. 22 ಕಿ.ಮೀ ನಡೆದುಕೊಂಡು ಹೋಗಿದ್ದೇನೆ. ಭಕ್ತರಿಗೆ ಯಾವುದೇ ವಾಹನದ ವ್ಯವಸ್ಥೆ ಮಾಡಿಲ್ಲ ಎಂದು ಅಳಲು ಹೇಳಿಕೊಂಡಿದ್ದಾರೆ.
ಬೆಳಗಾವಿಯಿಂದ ಒಟ್ಟು 30 ಜನರು ಕುಂಭಮೇಳಕ್ಕೆ ಹೋಗಿದ್ದರು. ಕಾಂಚನಾ ಕೋರ್ಪಡೆ ಮಾತ್ರ ಸಂಪರ್ಕದಲ್ಲಿದ್ದು, ಅರುಣ್ ಕೋಪರ್ಡೆ ಪುತ್ರನ ಸಂಪರ್ಕಕ್ಕೆ ಸಿಕ್ಕಿಲ್ಲ. ತಂದೆಯ ಮೊಬೈಲ್ ಮಿಸ್ ಆಗಿರಬಹುದು ಎಂದು ಪುತ್ರ ಓಂಕಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಅನೇಕ ಮಂಡಿ ವಿವಿಧ ಗುಂಪುಗಳಾಗಿ ಪ್ರಯಾಗ್ರಾಜ್ಗೆ ತೆರಳಿದ್ದಾರೆ. ಕೆಲವರು ರೈಲು ಮತ್ತು ವಿಮಾನದಲ್ಲಿ ಪ್ರಯಾಣಿಸಿದರೆ ಕೆಲವರು ಮಿನಿ ಬಸ್ ಮತ್ತು ಇತರ ವಾಹನಗಳಲ್ಲಿ ತೆರಳಿದ್ದರು. ಸಂಪರ್ಕಕ್ಕೆ ಸಿಗದ ಸಂಬಂಧಿಕರ ಬಗ್ಗೆ ಊರಿನಲ್ಲಿದ್ದವರು ಆತಂಕಗೊಂಡಿದ್ದಾರೆ.
ಜನವರಿ 28 ರ ಮಧ್ಯರಾತ್ರಿಯ ನಂತರ ಪ್ರಯಾಗ್ರಾಜ್ನ ಸಂಗಮ್ ದಂಡೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ಎಷ್ಟು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ನೀಡಿಲ್ಲ.
Four people -- two women and two girls from Belagavi-- are said to have suffered injuries in the stampede while on their way for the bathing ritual on the occasion of ‘Mauni Amavasya’ at the Mahakumbh at Prayagraj in Uttar Pradesh on Wednesday.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am