ಬ್ರೇಕಿಂಗ್ ನ್ಯೂಸ್
29-01-25 02:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಕನ್ನಡಿಗರು ಕೂಡ ಸಿಲುಕಿಕೊಂಡಿದ್ದಾರೆ. ಬೆಳಗಾವಿಯಿಂದ ಖಾಸಗಿ ಬಸ್ನಲ್ಲಿ ಮೂವತ್ತು ಜನರ ತಂಡ ಪ್ರಯಾಗರಾಜ್ಗೆ ಹೋಗಿತ್ತು. ಈ ಪೈಕಿ ಕಾಲ್ತುಳಿತದ ಬಳಿಕ ಐವರು ನಾಪತ್ತೆ ಆಗಿದ್ದಾರೆ.
ಬೆಳಗಾವಿ ನಗರದ ಶೆಟ್ಟಿಗಲ್ಲಿಯ ದಂಪತಿ ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ. ಚದುರಿ ಹೋಗಿದ್ದ ಇಬ್ಬರಿಗೂ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
.jpg?$p=5c9056e&f=16x10&w=852&q=0.8)


ಕಾಲ್ತುಳಿತದ ಭೀಕರತೆಯನ್ನು ಕನ್ನಡತಿ ಸರೋಜಿನಿ ಎಂಬಾಕೆ ಬಿಚ್ಚಿಟ್ಟಿದ್ದಾರೆ. ಎರಡು ಬಸ್ನಲ್ಲಿ 60 ಜನ ಬಂದಿದ್ದೆವು. 9 ಜನ ಸ್ನಾನ ಮಾಡುವುದಕ್ಕೆ ಹೋದಾಗ ಕಾಲ್ತುಳಿತ ಸಂಭವಿಸಿತು. ತಪ್ಪಿಸಿಕೊಳ್ಳಲು ನಮಗೆ ಯಾವುದೇ ದಾರಿಯೇ ಸಿಕ್ಕಿಲ್ಲ ಎಂದಿದ್ದಾರೆ.
ಬೆಂಗಳೂರಿನ ಉಮೇಶ್ ಈ ಬಗ್ಗೆ ಮಾತನಾಡಿದ್ದು, ಗಾಯ ಆಗಿದೆ, ಆಸ್ಪತ್ರೆಗೆ ಹೋಗಿ ಬಂದಿದ್ದೇನೆ. 22 ಕಿ.ಮೀ ನಡೆದುಕೊಂಡು ಹೋಗಿದ್ದೇನೆ. ಭಕ್ತರಿಗೆ ಯಾವುದೇ ವಾಹನದ ವ್ಯವಸ್ಥೆ ಮಾಡಿಲ್ಲ ಎಂದು ಅಳಲು ಹೇಳಿಕೊಂಡಿದ್ದಾರೆ.
ಬೆಳಗಾವಿಯಿಂದ ಒಟ್ಟು 30 ಜನರು ಕುಂಭಮೇಳಕ್ಕೆ ಹೋಗಿದ್ದರು. ಕಾಂಚನಾ ಕೋರ್ಪಡೆ ಮಾತ್ರ ಸಂಪರ್ಕದಲ್ಲಿದ್ದು, ಅರುಣ್ ಕೋಪರ್ಡೆ ಪುತ್ರನ ಸಂಪರ್ಕಕ್ಕೆ ಸಿಕ್ಕಿಲ್ಲ. ತಂದೆಯ ಮೊಬೈಲ್ ಮಿಸ್ ಆಗಿರಬಹುದು ಎಂದು ಪುತ್ರ ಓಂಕಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಅನೇಕ ಮಂಡಿ ವಿವಿಧ ಗುಂಪುಗಳಾಗಿ ಪ್ರಯಾಗ್ರಾಜ್ಗೆ ತೆರಳಿದ್ದಾರೆ. ಕೆಲವರು ರೈಲು ಮತ್ತು ವಿಮಾನದಲ್ಲಿ ಪ್ರಯಾಣಿಸಿದರೆ ಕೆಲವರು ಮಿನಿ ಬಸ್ ಮತ್ತು ಇತರ ವಾಹನಗಳಲ್ಲಿ ತೆರಳಿದ್ದರು. ಸಂಪರ್ಕಕ್ಕೆ ಸಿಗದ ಸಂಬಂಧಿಕರ ಬಗ್ಗೆ ಊರಿನಲ್ಲಿದ್ದವರು ಆತಂಕಗೊಂಡಿದ್ದಾರೆ.
ಜನವರಿ 28 ರ ಮಧ್ಯರಾತ್ರಿಯ ನಂತರ ಪ್ರಯಾಗ್ರಾಜ್ನ ಸಂಗಮ್ ದಂಡೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ಎಷ್ಟು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ನೀಡಿಲ್ಲ.
Four people -- two women and two girls from Belagavi-- are said to have suffered injuries in the stampede while on their way for the bathing ritual on the occasion of ‘Mauni Amavasya’ at the Mahakumbh at Prayagraj in Uttar Pradesh on Wednesday.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am