ಬ್ರೇಕಿಂಗ್ ನ್ಯೂಸ್
29-01-25 09:46 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವ ಹಾಳಾಗಿ ಹೋಗಿದೆ. ವಿಜಯೇಂದ್ರ ಅವರೇ ಎಲ್ಲವನ್ನೂ ನಿರ್ಧರಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗಿಂತಲೂ ಇವರೇ ದೊಡ್ಡವರಾಗಿದ್ದಾರೆ. ಇಷ್ಟು ದಿನ ಸಹಿಸಿಕೊಂಡೆ, ಇನ್ನು ಮುಂದೆ ಇರಕ್ಕಾಗಲ್ಲ. ವಿಜಯೇಂದ್ರ ವಿರುದ್ಧ ಯುದ್ಧ ಸಾರುತ್ತೇನೆ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಗುಡುಗಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ತಮ್ಮ ಮಗನನ್ನು ರಕ್ಷಣೆ ಮಾಡುತ್ತಿದ್ದಾರೆ. ಪಕ್ಷದ ಬಗ್ಗೆ ಗಮನ ಹೊಂದಿಲ್ಲ. ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ. ಎಲ್ಲವನ್ನೂ ಹೇಳುತ್ತೇನೆ. ದೆಹಲಿಗೆ ಹೋಗಿ ಅಮಿತ್ ಶಾ, ಜೆ.ಪಿ ನಡ್ಡಾ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತೇನೆ. ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ, ನಾಯಕರ ಅಸಮಾಧಾನ, ನಾಯಕತ್ವದ ಸಮಸ್ಯೆಗಳನ್ನು ಹೇಳುತ್ತೇನೆ ಎಂದರು.
ಇಷ್ಟು ದಿನ ಸಹಿಸಿಕೊಂಡೆ, ಆದರೆ ಇನ್ನು ಮುಂದೆ ಯುದ್ಧ ಸಾರಲಿದ್ದೇನೆ. ವಿಜಯೇಂದ್ರ ಅವರ ಧೋರಣೆಗೆ ನನ್ನ ತೀವ್ರ ವಿರೋಧ ಇದೆ. ಈಗಲೇ ಇವರ ಅಹಂಕಾರಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ಅವರನ್ನು ಬದಲಾಯಿಸಬೇಕು ಎಂದರು.
ಪಕ್ಷ ಬಿಡುತ್ತೀರಾ ಎಂಬ ಪ್ರಶ್ನೆಗೆ, ರಾಷ್ಟ್ರೀಯ ನಾಯಕರ ಜೊತೆಗೆ ಮಾತಾಡಬೇಕು, ಪಕ್ಷ ಬಿಡುವ ವಿಚಾರವನ್ನು ಈಗಲೇ ನಿರ್ಧರಿಸಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಯಾವಾಗ ಏನಾಗುತ್ತದೋ ಗೊತ್ತಿಲ್ಲ, ಏನಾದರೂ ಸಂಭವಿಸಬಹುದು ಎನ್ನುವ ಮೂಲಕ ಹೊರಗೆ ಕಾಲಿಡುತ್ತಿರುವ ಸೂಚನೆ ನೀಡಿದರು.
"ವಿಜಯೇಂದ್ರ ಅವರು ಸಣ್ಣ ವಯಸ್ಸಿನಲ್ಲಿ ರಾಜ್ಯಾಧ್ಯಕ್ಷರಾಗಿದ್ದಾರೆ, ಒಂದು ವರ್ಷದಲ್ಲಿ ಅನುಭವ ಪಡೆಯುತ್ತಾರೆ ಎಂದೆನಿಸಿತ್ತು. ಆದರೆ ಬದಲಾವಣೆ ಕಂಡು ಬಂದಿಲ್ಲ. ಪಕ್ಷದಲ್ಲಿ ಪ್ರಜಾಪ್ರಭುತ್ವವಿಲ್ಲ, ನೇಮಕಾತಿಗಳನ್ನು ಏಕಚಕ್ರಾಧಿಪತ್ಯದಂತೆ ಮಾಡಲಾಗುತ್ತಿದೆ. 100% ಶಾಸಕರು ನಮ್ಮ ಬೆಂಬಲದಲ್ಲಿದ್ದಾರೆ, ಆದರೂ ನಾಯಕತ್ವ ತೀರ್ಮಾನಗಳು ಆಂತರಿಕ ಪ್ರಜಾಪ್ರಭುತ್ವದೊಂದಿಗೆ ನಡೆಯುತ್ತಿಲ್ಲ ಎಂದರು. ಈಗಾಗಲೇ ಬಣ ಬಡಿದಾಟದಿಂದ ಕಂಗೆಟ್ಟಿರುವ ಬಿಜೆಪಿಯಲ್ಲಿ ಈಗ ಸುಧಾಕರ್ ಕೂಡ ತೊಡೆ ತಟ್ಟಿರುವುದು ತೀವ್ರ ತಳಮಳ ಸೃಷ್ಟಿಸಿದೆ.
Dr K Sudhakar slams B. Y. Vijayendra says get ready for war. Is Vijayendra greater than Yediyurappa he added.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm