ಬ್ರೇಕಿಂಗ್ ನ್ಯೂಸ್
30-01-25 03:35 pm HK News Desk ಕರ್ನಾಟಕ
ಮೈಸೂರು, ಜ.30: ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ನೇಮಕದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ಅಧ್ಯಕ್ಷರ ನೇಮಕದಲ್ಲಿ ಸುಧಾಕರ್ ಅವರನ್ನ ನಾನು ವಿಶ್ವಾಸಕ್ಕೆ ತೆಗದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಏಕೆಂದರೆ, ಅದರ ಚುನಾವಣೆ ಉಸ್ತುವಾರಿ ಹೊತ್ತವರೇ ಬೇರೆ. ಉಸ್ತುವಾರಿಗಳು ಹೈಕಮಾಂಡ್ ಗೆ ಹೆಸರು ಕಳುಹಿಸಿದ್ದಾರೆ.
ಹೈಕಮಾಂಡ್ ತೀರ್ಮಾನ ಮಾಡಿದ್ದಾರೆ. ಇದರಲ್ಲಿ ಯಾವ ಹಂತದಲ್ಲೂ ನನ್ನ ಪಾತ್ರ ಬರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಡಾ.ಸುಧಾಕರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಸುಧಾಕರ್ ಅವರಿಗೆ ಅನುಭವ ಹಾಗೂ ಮಾಹಿತಿ ಕೊರತೆ ಇದೆ. ಹೀಗಾಗಿ ಈ ರೀತಿ ಮಾತನಾಡಿದ್ದಾರೆ. ಇದರಲ್ಲಿ ನಾನು ಟಾರ್ಗೆಟ್ ಆಗಿದ್ದೇನೆ, ಯಡಿಯೂರಪ್ಪ ಮಗ ಅನ್ನುವ ಕಾರಣಕ್ಕೆ ಟಾರ್ಗೆಟ್ ಆಗಿದ್ದೇನೆ ಎಂಬುದೆನ್ನಲ್ಲ ನಾನು ಹೇಳುವುದಿಲ್ಲ. ನನಗೆ ಯಡಿಯೂರಪ್ಪನವರ ಮಗ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ಎಲ್ಲಾ ಟೀಕೆಗಳಿಂದ ಪಾಠ ಕಲಿತಿದ್ದೇನೆ ಎಂದು ಮೈಸೂರಿನಲ್ಲಿ ಬಿವೈ ವಿಜಯೇಂದ್ರ ಹೇಳಿದ್ದಾರೆ.
ನನಗೆ ಸುಧಾಕರ್ ಯಾವುದೇ ಫೋನ್ ಕರೆ ಮಾಡಿಲ್ಲ. ನಾಲ್ಕು ದಿನಗಳ ಹಿಂದೆ ಮಾತನಾಡಬೇಕು ಅಂಥ ಮೇಸೆಜ್ ಮಾಡಿದ್ರು. ನಾನು ಅನಿವಾರ್ಯವಾಗಿ ದೆಹಲಿಗೆ ಹೋಗಬೇಕಿತ್ತು. ಹೀಗಾಗಿ ಭೇಟಿ ಸಾಧ್ಯವಾಗಲಿಲ್ಲ. ಅಂತಹ ನಾಯಕರು ಕರೆ ಮಾಡಿದರೆ ಸ್ವೀಕರಿಸಲು ಆಗದಷ್ಟು ದೊಡ್ಡವನು ನಾನಲ್ಲ. ಯಾವ ಅರ್ಥದಲ್ಲಿ ಸುಧಾಕರ್ ಟೀಕೆ ಮಾಡಿದ್ದಾರೆ ಗೊತ್ತಿಲ್ಲ. ಪಕ್ಷಕ್ಕಾಗಿ ನಾನು ಎಲ್ಲಾ ಟೀಕೆಗಳನ್ನ ಸಹಿಸಿಕೊಳ್ಳುತ್ತೇನೆ.
ಯಾರು ಏನೇ ಮಾತನಾಡಲಿ ಎಲ್ಲವನ್ನೂ ಸೌಮ್ಯವಾಗಿ ಸ್ವೀಕರಿಸಿದ್ದೇನೆ. ಎಲ್ಲರಿಂದಲೂ ಅನುಭವಗಳನ್ನ ಕಲಿಯುತ್ತಿದ್ದೇನೆ. ನನಗೆ ಪಕ್ಷ ಮಾತ್ರ ಮುಖ್ಯ. ನಾನು ಯಡಿಯೂರಪ್ಪನವರಿಂದ ಜೀವನದ ಅನುಭವಗಳನ್ನ ಕಲಿತಿದ್ದೇನೆ. ನಾನು ಯಾರ ಜೊತೆಯೂ ಯುದ್ಧ ಮಾಡಲು ಅಧ್ಯಕ್ಷ ಆಗಿಲ್ಲ. ಪಕ್ಷ ಕಟ್ಟಲು ಅಧ್ಯಕ್ಷ ಅಗಿದ್ದೇನೆ ಅಷ್ಟೇ. ಸುಧಾಕರ್ ಬಾಯಲ್ಲಿ ಯುದ್ಧದ ಮಾತು ಯಾಕೆ ಬಂತೋ ಗೊತ್ತಿಲ್ಲ. ನಾನು ಅವರ ಜೊತೆ ಮಾತನಾಡಲು ಮುಕ್ತನಾಗಿದ್ದೇನೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
No role in selecting district president says B. Y. Vijayendra to Dr Sudhakar. With this demand, Sudhakar became the latest growing voice of disgruntled leaders in the state, who are lobbying hard to replace Vijayendra as the state unit president.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm