ಬ್ರೇಕಿಂಗ್ ನ್ಯೂಸ್
31-01-25 02:02 pm HK News Desk ಕರ್ನಾಟಕ
ಮೈಸೂರು, ಜ 31: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
2 ಲಕ್ಷ ಹಣ ಕಟ್ಟಿ, ಇಲ್ಲವೇ ಜೈಲು ಶಿಕ್ಷೆ ಅನುಭವಿಸಿ ;
ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ. 2 ಲಕ್ಷ ಹಣ ಕಟ್ಟಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೋರ್ಟ್ ತೀರ್ಪು ನೀಡಿದೆ.
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ:
ಇನ್ನು ಚೆಕ್ ಬೌನ್ಸ್ ಕೇಸ್ನಲ್ಲಿ ಕೋರ್ಟ್ ತೀರ್ಪು ನೀಡಿರೋ ಬಗ್ಗೆ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರ್ ನನ್ನ ವಿರುದ್ಧ ಬೇಕು ಅಂತಲೇ ಚೆಕ್ ಬೌನ್ಸ್ ಕೇಸ್ ಹಾಕಿದ್ರು, ಚೆಕ್ ಡೇಟ್ ತಿದ್ದಿ ಬೌನ್ಸ್ ಮಾಡಿದ್ರು ಅಂತ ಆರೋಪಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದೆ, ಈಗ ಕೋರ್ಟ್ ತೀರ್ಪು ನೀಡಿದೆ ಎಂದಿದ್ದಾರೆ. ಚೆಕ್ ಬೌನ್ಸ್ ವಿಚಾರವಾಗಿ ನಾನು ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ ಅಂತ ಸ್ನೇಹಮಯಿ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣದ ದೂರುದಾರರಾಗಿದ್ದಾರೆ.
Cheque bounce case Snehamahi Krishna gets 6 months imprisonment by mysuru court. The court has ordered to pay 2 laksh or jail term of 6 months. Snehamahi stated that he will challenge the order in the high court.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm