ಬ್ರೇಕಿಂಗ್ ನ್ಯೂಸ್
31-01-25 06:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಮಹತ್ವದ ಬೆಳವಣಿಗೆಯಲ್ಲಿ ಗಂಭೀರ ಸ್ಥಿತಿಯಲ್ಲಿ ನರಳುವ ರೋಗಿಗಳಿಗೆ ಘನತೆಯಿಂದ ಸಾಯುವುದಕ್ಕೆ ಅವಕಾಶ ನೀಡುವ ಹಕ್ಕನ್ನು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆ ಕಾಣದೆ ಸಂಕಷ್ಟ ಅನುಭವಿಸುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ.
ಬಹುದಿನಗಳ ಬೇಡಿಕೆಯಾಗಿರುವ ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಮಂಡಳಿ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಜಾರಿ ಮಾಡಲು ಮುಂದಾಗಿದೆ.

ದಯಾಮರಣಕ್ಕೆ ಅನುಮತಿ ಪ್ರಕ್ರಿಯೆ ಹೇಗೆ?
ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ವೈದ್ಯರ ಬೋರ್ಡ್ಗಳನ್ನು ಸ್ಥಾಪಿಸಲಾಗುತ್ತದೆ. ಪ್ರೈಮರಿ ಬೋರ್ಡ್ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.
ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲಿಗೆ ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆನಂತರ, ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯುತ್ತಾರೆ.
ಸುಪ್ರೀಂ ಕೋರ್ಟ್ ಸೂಚನೆ ಪಾಲನೆ
ತಾವು ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ಸುಮಾರು 42 ವರ್ಷಗಳ ಕಾಲ ಜೀವಚ್ಛವದಂತೆ ಬದುಕಿದ ಅರುಣಾ ಶಾನುಭಾಗ್ ಅವರ ದಯಾಮರಣ ಅರ್ಜಿಯ ಕುರಿತ ತೀರ್ಪಿನ ವೇಳೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತ್ತು. ದಯಾಮರಣ ನೀಡುವ ವಿಚಾರವಾಗಿ ಮಾರ್ಗದರ್ಶಕ ಸೂತ್ರಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
The Karnataka Health Department has passed a historic order to implement the Supreme Court’s directive regarding patients’ “Right to Die” with dignity. This move aims to benefit terminally ill patients with no hope of recovery or those in a persistent vegetative state, allowing for the withdrawal of life-sustaining treatment when no longer beneficial.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm