ಬ್ರೇಕಿಂಗ್ ನ್ಯೂಸ್
02-02-25 01:43 pm HK News Desk ಕರ್ನಾಟಕ
ಕಲಬುರಗಿ, ಫೆ.2: ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜಿನಾಮೆ ನೀಡಿ ಅಚ್ಚರಿ ಮೂಡಿಸಿರುವ ಅಳಂದ ಶಾಸಕ ಬಿ.ಆರ್ ಪಾಟೀಲ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಯಾವತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ರಾಜಿನಾಮೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೆ ವರೆಗೂ ಸಿದ್ದರಾಮಯ್ಯ ಅವರ ಸ್ನೇಹಿತನಾಗಿಯೇ ಉಳಿಯುತ್ತೇನೆ ಎಂದು ಬಿಆರ್ ಪಾಟೀಲ್ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಆರ್ ಪಾಟೀಲ್ ದಿಢೀರ್ ರಾಜೀನಾಮೆ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಏಕಾಏಕಿ ಏಕೆ ರಾಜೀನಾಮೆ ನೀಡಿದ್ದಾರೆ ಎಂಬ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಅವರು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಸಮಾಧಾನದ ಮಾತುಗಳನ್ನಾಡಿದ್ದಾರೆ.
ಬಿಆರ್ ಪಾಟೀಲ್ ಅವರು ಆಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಯಸಿದ್ದರು. ಸಚಿವ ಸ್ಥಾನ ಸಿಗದೇ ಇದ್ದುದರಿಂದ ಹಿರಿಯ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿತ್ತು. ಇದರ ಜೊತೆಗೆ ಹೆಚ್ಚಿನ ಅನುದಾನ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದರು. ಕಳೆದ ಬಜೆಟ್ನಲ್ಲಿ ಆಳಂದ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡದೆ ಇರುವುದಕ್ಕೆ ಬೇಸರಗೊಂಡಿದ್ದರು. ಈ ಬಾರಿ ರಾಜೀನಾಮೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
BR Patil, senior Congress MLA and a close associate of CM Siddaramaiah, created quite a flutter in the state's political circles Saturday as he resigned from his position as the CM's political adviser. His sudden exit comes at a time when differences within Congress over clamours for changes in the party's state leadership have intensified.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm