ಬ್ರೇಕಿಂಗ್ ನ್ಯೂಸ್
03-02-25 03:18 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.3: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದನ್ನು ಬಿಜೆಪಿ ವ್ಯಂಗ್ಯವಾಡಿದೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ಬಿಜೆಪಿ ಟೀಕಿಸಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದರು. 'ಶಬ' ಎಂದು ಬರೆದ ಬಳಿಕ ಬೆಂಬಲಿಗರು ಶುಭ ಮಾಡಲು ಸೂಚಿಸಿದ್ದರಿಂದ ಆನಂತರ ಸರಿಯಾಗಿ ಬರೆದಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಶಿಕ್ಷಣ ಸಚಿವರ ರೀತಿಯಲ್ಲೇ ಕನ್ನಡ ಸಂಸ್ಕೃತಿ ಸಚಿವರಿಗೂ ಕನ್ನಡ ಓದಲು, ಬರೆಯಲು ಬರಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ ಎಂದಿರುವ ಬಿಜೆಪಿ, ಕನ್ನಡ ಓದಲು ಬರೆಯಲು ಬಾರದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಂದು ಕಡೆಯಾದರೆ, ಕನ್ನಡದ ಸುಲಭವಾದ ಪದವನ್ನು ಬರೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಲ ವಿಲ ಒದ್ದಾಡಿದ್ದಾರೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಶಿಕ್ಷಣ ಸಚಿವ, ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ವ್ಯಂಗ್ಯವಾಡಿದೆ.
ಕೆ.ಪಿ.ಎಸ್ಸಿ ಪ್ರಶ್ನೆ ಪತ್ರಿಕೆಗಳಲ್ಲು ಪದೇ ಪದೇ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸುವುದು. ಕನ್ನಡ ಶಾಲೆಗಳನ್ನು ಮುಚ್ಚಿಸುತ್ತಿರುವುದು ಈ ಎಲ್ಲವನ್ನೂ ನೋಡಿದರೆ ಕರುನಾಡಲ್ಲಿ ಕನ್ನಡವನ್ನು ಅಳಿಸಿ ಹಾಕಬೇಕೆಂದು ಕಾಂಗ್ರೆಸ್ ಹೊರಟಿದೆ ಎಂದೂ ಬಿಜೆಪಿ ಕಿಡಿಕಾರಿದೆ.
Shivraj Tangadagi, the Minister of #Kannada and #Culture, struggling with "Shubhavagali" – looks like even he needs a dictionary for cultural preservation! #karnataka https://t.co/OBbs4CdwSM
— HotTakeInsight (@HotTakeInsight) February 1, 2025
Kannada and Culture Minister Shivaraj Tangadagi was trolled severely by the opposition BJP after he struggled to write a Kannada word during his visit to an Anganvadi in Karatagi village in Koppal district.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm