ಬ್ರೇಕಿಂಗ್ ನ್ಯೂಸ್
03-02-25 08:20 pm HK News Desk ಕರ್ನಾಟಕ
ಮೈಸೂರು, ಫೆ.4 : ಸಿಎಂ ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಮೈಸೂರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೆ ಗಂಭೀರ ಆರೋಪ ಮಾಡಿದ್ದು ಲೋಕಾಯುಕ್ತಕ್ಕೆ ಮತ್ತೊಂದು ದೂರು ನೀಡಿದ್ದಾರೆ.
ಈಗಾಗಲೇ ಮುಡಾ ಸೈಟ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಕೆಸರೆ ಗ್ರಾಮದ 3.16 ಕುಂಟೆ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಮಲ್ಲಿಕಾರ್ಜುನ ಕೊಟ್ಟಿದ್ದಾರೆ ಎಂದು ಹೇಳಿದ್ದರು. ಈಗ ಮತ್ತೆ ಮಲ್ಲಿಕಾರ್ಜುನ ಸ್ವಾಮಿ ಒಂದು ಎಕರೆ ಭೂಮಿ ದಾನ ಮಾಡಿದ್ದಾರೆ. ಯಾಕೆ ಮಲ್ಲಿಕಾರ್ಜುನ ಸ್ವಾಮಿ ಅವರೇ ಖರೀದಿ ಮಾಡಿದ ಭೂಮಿಗಳನ್ನು ಇವರಿಗೆ ದಾನ ಮಾಡ್ತಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರು ಎಲ್ಲಿಯೂ ಹೇಳಿಲ್ಲ ಯಾಕೆ. ಮೊದಲು ಪಾರ್ವತಿಯವರ ಕುಟುಂಬದ ಆಸ್ತಿ ಎಷ್ಟು ಎಂಬುದು ಪತ್ತೆ ಮಾಡಬೇಕು. ಆನಂತರ, ಮಲ್ಲಿಕಾರ್ಜುನ ಸ್ವಾಮಿ ಎಷ್ಟು ಆಸ್ತಿ ಖರೀದಿ ಮಾಡಿದ್ದಾರೆ ಎಂಬುದನ್ನ ತನಿಖೆ ಮಾಡಬೇಕು ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ಸ್ನೇಹಮಯಿ ಕೃಷ್ಣ ಆಗ್ರಹ ಮಾಡಿದ್ದಾರೆ.
1983ರಲ್ಲಿ ಆಲನಹಳ್ಳಿ ಸರ್ವೇ ನಂಬರ್ 113/4 ರಲ್ಲಿ ಒಂದು ಎಕರೆ ಭೂಮಿಯನ್ನು ಸಿದ್ದರಾಮಯ್ಯ ಖರೀದಿ ಮಾಡಿದ್ದಾರೆ. 1996 ರಲ್ಲಿ ಆ ಭೂಮಿಗೆ ಮುಡಾದಿಂದ ಅಂತಿಮ ಅದಿಸೂಚನೆ ಹೊರಡಿಸಲಾಗಿತ್ತು. ಭೂಮಿಗೆ ಡಿ ನೋಟಿಫೈಯನ್ನೂ ಮಾಡಿಸಲಾಗಿದೆ. ಸಿದ್ದರಾಮಯ್ಯ ಅವರೇ ಪ್ರಭಾವ ಬೀರಿ ಡಿ ನೋಟಿಫೈ ಮಾಡಿಸಿದ್ದರು ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ಅದೇ ಭೂಮಿಯನ್ನ 2010 ಅಕ್ಟೋಬರ್ ನಲ್ಲಿ ಪತ್ನಿ ಪಾರ್ವತಿಗೆ ದಾನ ಮಾಡಿರುವಂತೆ ತೋರಿಸಲಾಗಿದೆ. ಪಾರ್ವತಿ ಸಿದ್ದರಾಮಯ್ಯನವರು ಒಂದೇ ತಿಂಗಳಲ್ಲಿ ಅದನ್ನು ಮಗನ ಹೆಸರಿಗೆ ದಾನ ಮಾಡಿದ್ದಾರೆ. ತಮ್ಮ ಹೆಸರಿಗೆ ಬಂದ ಭೂಮಿಯನ್ನ ಯತೀಂದ್ರ ನಾಲ್ಕೇ ತಿಂಗಳಲ್ಲಿ ಬೇರೆಯವರಿಗೆ ಮಾರಾಟ ಮಾಡಿರೋದು ದಾಖಲೆಗಳಿಂದ ತಿಳಿದುಬರುತ್ತದೆ. ಈ ಎಲ್ಲಾ ವಿಚಾರಗಳನ್ನು ಇಲ್ಲಿವರೆಗೆ ಯಾಕೆ ಸಿದ್ದರಾಮಯ್ಯನವರು ತಿಳಿಸಿಲ್ಲ. ಹೀಗಾಗಿ ಸಿದ್ದರಾಮಯ್ಯನವರೇ ಮಲ್ಲಿಕಾರ್ಜುನ ಸ್ವಾಮಿ ಹೆಸರಿನಲ್ಲಿ ಬೇನಾಮಿ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ. ಅಧಿಕಾರಿಗಳು ವಿಳಂಬ ನೀತಿ ತೋರಿಸಿದ್ರೆ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
Karnataka Chief Minister Siddaramaiah is facing fresh allegations of acquiring benami properties, with Right to Information Act (RTI) activist Snehamayi Krishna filing another complaint against him and his family with the Lokayukta
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm