ಬ್ರೇಕಿಂಗ್ ನ್ಯೂಸ್
04-02-25 12:59 pm HK News Desk ಕರ್ನಾಟಕ
ಕಾರವಾರ, ಫೆ.4: ಇನ್ಮುಂದೆ ಯಾರಾದ್ರೂ ಗೋಹತ್ಯೆ ನಡೆಸಿದರೆ ರಸ್ತೆ ಮಧ್ಯೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹೊಡೆಯುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವಿನ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿತ್ತು ಎಂದು ತಿಳಿಸಿದ್ದಾರೆ.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Vaidya told reporters in Karwar that even when the BJP was in power, cow thefts were reported, but cow rearers need not fear under the Congress government as it is in favour of cow and cow rearers.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am