ಬ್ರೇಕಿಂಗ್ ನ್ಯೂಸ್
04-02-25 03:09 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪೊಲೀಸರು ದ್ವಿಚಕ್ರ ವಾಹನ ಸವಾರನಿಗೆ ಬರೋಬ್ಬರಿ 1.61 ಲಕ್ಷ ರೂ. ದಂಡ ವಿಧಿಸಿದ್ದು, ದಂಡದ ಮೊತ್ತವು ವಾಹನದ ಬೆಲೆಗಿಂತಲೂ ಹೆಚ್ಚಾಗಿದೆ.
ಪೊಲೀಸರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ, ಕೆಲ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುವುದು ಸಾಮಾನ್ಯವಾಗಿದೆ. ಅಂತಹವರ ವಿರುದ್ಧ ಪೊಲೀಸರು ದೂರು ದಾಖಲಿಸಿ ದಂಡ ವಿಧಿಸುತ್ತಿದ್ದಾರೆ. ಆದರೆ, ನಗರದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಪೊಲೀಸರನ್ನು ಲೆಕ್ಕಿಸದೆ ಪದೇ ಪದೆ ಸಂಚಾರ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾನೆ.
ಕೆಎ-05, ಜೆಎಕ್ಸ್-1344 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದ ಸವಾರನು ಪೊಲೀಸರ ದಂಡಾಸ್ತ್ರಕ್ಕೂ ಜಗ್ಗದೆ ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದಾನೆ. ಹೆಲ್ಮೆಟ್ ಧರಿಸದಿರುವುದು, ಸಿಗ್ನಲ್ ಜಂಪ್, ಏಕಮುಖ ಸಂಚಾರದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಾಲನೆ, ವಾಹನ ನಿಲುಗಡೆ ನಿರ್ಬಂಧಿತ ಸ್ಥಳಗಳಲ್ಲಿ ವಾಹನದ ಪಾರ್ಕಿಂಗ್ ಸೇರಿದಂತೆ ಹಲವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾನೆ.
ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿ 1.61 ಲಕ್ಷ ರೂ. ದಂಡ ವಿಧಿಸಿದ್ದಾರೆ. ಈ ಸವಾರಿಗೆ ಕಳೆದ ವರ್ಷ 1,05,500 ರೂ. ದಂಡ ವಿಧಿಸಿದ್ದರೆ, ಈ ವರ್ಷ 56 ಸಾವಿರ ರೂ. ದಂಡ ವಿಧಿಸಲಾಗಿದೆ.
ದಂಡದ ಮೊತ್ತವು ಆತನ ದ್ವಿಚಕ್ರ ವಾಹನದ ಮೌಲ್ಯಕ್ಕಿಂತಲೂ ಹೆಚ್ಚಿದ್ದು, ಸಂಚಾರ ಪೊಲೀಸರು ಆ ಸವಾರನ ವಿರುದ್ಧ ಇನ್ನೂ ಯಾಕೆ ಕಠಿಣ ಕ್ರಮ ಕೈಗೊಂಡಿಲ್ಲ. ಆರ್ಟಿಒ ಅಧಿಕಾರಿಗಳು ಏಕೆ ಆತನ ವಾಹನ ಜಪ್ತಿ ಮಾಡಿಲ್ಲ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಈ ಪ್ರಶ್ನೆ ಬೆನ್ನಲ್ಲೇ ಕಾರ್ಯಪ್ರವೃತ್ತವಾದ ಬೆಂಗಳೂರು ಸಿಟಿ ಮಾರ್ಕೆಟ್ ಸಂಚಾರ ಠಾಣೆ ಪೊಲೀಸರು ವಾಹವನ್ನ ಜಪ್ತಿ ಮಾಡಿದ್ದಾರೆ
A two-wheeler worth not more than Rs 50,000 was fined Rs 1.61 lakh by the Bengaluru Traffic Police for 311 traffic fines pending since February 2023. On Monday, the City Market Traffic Police seized the scooter bearing the registration number KA 05 JX 1344 and nabbed the alleged driver who had committed over 300 traffic violations but had evaded paying the fines.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm